ದೇವನಹಳ್ಳಿ: ತಾಲೂಕು ಖಾದಿ ಗ್ರಾಮೋದ್ಯೋಗ ಕಸುಬುದಾರರ ಕೈಗಾರಿಕಾ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಾರಹಳ್ಳಿ ಜಯರಾಮ್ ಅವಿರೋಧ ಆಯ್ಕೆಯಾಗಿರುವುದಕ್ಕೆ ಹಲವು ಮುಖಂಡರಿಂದ ಅಭಿನಂದನೆ ಸ್ವೀಕರಿಸಿದರು.
ಅಧ್ಯಕ್ಷ ಜಯರಾಮ್ ಮಾತನಾಡಿ, ನೂತನ ಸ್ಥಾನದ ಜವಾಬ್ದಾರಿ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆ ಯಲಾಗುವುದು. ಸಂಘದಲ್ಲಿ ದೊರೆ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಶ್ರಮಿಸುತ್ತೆನೆ. ಸಚಿವರು, ಮುಖಂಡರು ಮತ್ತು ಸಂಘದ ಎಲ್ಲಾ ನಿರ್ದೇಶಕರ ಮಾರ್ಗದರ್ಶನ ಪಡೆಯುತ್ತೆನೆ ಎಂದರು.
ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳಾ ಮೋಹನ್ ಆಯ್ಕೆಯಾದ್ದರು. ಮುಖಂಡ ಬೈಯಪ ಅಧ್ಯಕ್ಷ ವಿ.ಶಾಂತ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಬಿದಲೂರು ಗ್ರಾ.ಪಂ. ಅಧ್ಯಕ್ಷ ಎಸ್.ಪಿ.ಮುನಿರಾಜು, ಬೂದಿಗೆರೆ ಲಕ್ಷ್ಮಣ್ ಮೂರ್ತಿ, ರಘು,ನಾಗೇಗೌಡ , ಕಾರಹಳ್ಳಿ ಕೆಂಪರಾಜು ಭಾಗಿಯಾಗಿದ್ದರು.