- ರಸ್ತೆ ಬದಿ ಅಂಗಡಿಗಳ ಮಾಲೀಕರಿಗೆ ಅರಿವು ಮೂಡಿಸಿದ ಸಬ್ ಇನ್ಸ್ ಪೆಕ್ಟರ್ ನವೀನ್
ಪ್ರತಿನಿಧಿ ವರದಿ ಕೃಷ್ಣರಾಜಪೇಟೆ
ಪಟ್ಟಣದಲ್ಲಿ ರಸ್ತೆ ಸಂಚಾರ ಸುಗಮವಾಗಿ ಸಾಗಲು ರಸ್ತೆ ಬದಿಯ ವ್ಯಾಪಾರಿಗಳು ತಮ್ಮ ವಾಪಾರ ವಹಿವಾಟಿನ ಸರಕುಗಳನ್ನು ಸ್ವಲ್ಪ ಹಿಂದಕ್ಕೆ ಇಟ್ಟುಕೊಂಡು ಸಾರ್ವಜನಿಕರ ತಿರಗಾಟಕ್ಕೆ ಅಡಚಣೆಯಾಗದಂತೆ ವ್ಯಾಪಾರ ಮಾಡಬೇಕು ಎಂದು ಪಟ್ಟಣ ಠಾಣೆಯ ಪಿ.ಎಸ್.ಐ. ನವೀನ್ ರಸ್ತೆ ಬದಿಯ ವ್ಯಾಪಾರಿಗಳಿಗೆ ಅರಿವು ಮೂಡಿಸಿದರು.
ಪಟ್ಟಣದಲ್ಲಿ ಫುಟ್ ಪಾತ್ ಅತಿಕ್ರಮಣದಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಸಾರ್ವಜನಿಕ ದೂರುಗಳ ಬೆನ್ನಲ್ಲೆ ಎಚ್ಚೆತ್ತ ಪಟ್ಟಣ ಪೊಲೀಸರು ಪಟ್ಟಣದ ಮುಖ್ಯರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡ ವ್ಯಾಪಾರಿಗಳಿಗೆ ಪುಟ್ಪಾತ್ ಮಾಡಿದರೆ ಅದರಿಂದಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದರಲ್ಲದೆ ಜನ ಸಂಚಾರಕ್ಕೆ ಅಡ್ಡಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ನೂರಾರು ಬೀದಿಬದಿಯ ವ್ಯಾಪಾರಿಗಳು ತಮ್ಮ ಜೀವನ ನಿರ್ವಹಣೆಗಾಗಿ ವ್ಯಾಪಾರ ವಹಿವಾಟು ಮಾಡುತ್ತಿದ್ದು ದಿನೇ ದಿನೆ ಅವರುಗಳು ರಸ್ತೆಯ ಅಂಚಿಗೆ ತಮ್ಮ ಸರಕುಗಳನ್ನು ಹಾಗೂ ತಳ್ಳುಗಾಡಿಗಳನ್ನು ನಿಲ್ಲಿಸಿಕೊಳ್ಳುತ್ತಾರೆ. ಇದರಿಂದಾಗಿ ಲಾರಿ, ಬಸ್ಸು ಸೇರಿದಂತೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಹಲವಾರು ಅಪಘಾತಗಳು ಸಂಭವಿಸುತ್ತಿವೆ. ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು ಬೀದಿಬದಿಯ ವ್ಯಾಪಾರಿಗಳು ತಮ್ಮತಮ್ಮ ವ್ಯಾಪಾರದ ಸಾಮಗ್ರಿಗಳನ್ನು ರಸ್ತೆಯ ಫುಟ್ಪಾತ್ ನಿಂದ ಸ್ವಲ್ಪ ದೂರ ಇಟ್ಟುಕೊಂಡು ವ್ಯಾಪಾರ ನಡೆಸುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.
ದ್ವಿಚಕ್ರವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದನ್ನು ಬಿಟ್ಟು ರಸ್ತೆಯಿಂದ ಸ್ವಲ್ಪ ದೂರ ತಮ್ಮ ವಾಹನಗಳನ್ನು ನಿಲುಗಡೆ ಮಾಡಬೇಕು. ಹಳೆಯ ವಿಜಯಬ್ಯಾಂಕ್ ಕಟ್ಟಡದ ಬಳಿ ವಾಹನ ಸವಾರರಿಗೆ ಹೆಚ್ಚಿನ ಪ್ರಮಾಣದ ತೊಂದರೆಯಾಗುತ್ತಿದ್ದು ಸಾರ್ವಜನಿಕರು ಸುಗಮಸಂಚಾರದ ದೃಷ್ಟಿಯಿಂದ ಪೊಲಿಸರಿಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಪಿಎಸ್ಐ ಹರೀಶ್, ಎ.ಎಸ್.ಐ ಬಸಪ್ಪ, ಆಲೇಗೌಡ, ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
ಚಿತ್ರಶೀರ್ಷಿಕೆ: ೨೮ ಕೆ.ಆರ್.ಪಿ ೦೩: ಪಟ್ಟಣದ ಮುಖ್ಯರಸ್ತೆಯಲ್ಲಿ ಸಂಚಾರ ಸುಗಮವಾಗಿ ಸಾಗಲು ರಸ್ತೆ ಬದಿಯ ವ್ಯಾಪಾರಿಗಳಿಗೆ ಪಿ.ಎಸ್.ಐ. ನವೀನ್ ನೇತೃತ್ವದಲ್ಲಿ ಪಟ್ಟಣ ಪೊಲೀಸರು ರಸ್ತೆ ಬದಿಯ ವ್ಯಾಪಾರಿಗಳಿಗೆ ಅರಿವು ಮೂಡಿಸಿದರು.