ಪ್ರತಿನಿಧಿ ವರದಿ ಚಾಮರಾಜನಗರ
ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಸಮಿತಿ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಜಿಲ್ಲಾಧ್ಯಕ ಎಂ.ಶಿವನಾಗಣ್ಣ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಸಮಿತಿ ರಚನೆ, ಉದ್ಘಾಟನಾ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ ಅಸ್ತಿತ್ವದಲ್ಲಿದ್ದು, ರಾಜ್ಯಾಧ್ಯಕ್ಷ ಚಿದರವಳ್ಳಿ ಮಹದೇವಸ್ವಾಮಿ ಅವರು ನೊಂದ ಬಡ ಜನರ ದನಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಸಮಿತಿ ಸ್ಥಾಪನೆ ಮಾಡಲಾಗುತ್ತಿದೆ. ಸದ್ಯದಲ್ಲಿ ಸಂಘದ ರಾಜ್ಯಾಧ್ಯಕ್ಷರು, ಛಲವಾದಿ ಬಂಧುಗಳನ್ನು ಆಹ್ವಾನಿಸಿ ಜಿಲ್ಲಾ ಸಮಿತಿ ಉದ್ಘಾಟನೆ ಮಾಡಲಾಗುತ್ತದೆ ಎಂದರು.
ಸಂಘದ ಸರ್ವತೋಮುಖ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು. ಸಂಘಟನೆ ಹಾಗೂ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಮೊದಲಾದ ಛಲವಾದಿ ಸಮಾಜದ ಪ್ರಗತಿಗಾಗಿ ಶ್ರಮಿಸಲಾಗುವುದು. ಛಲವಾದಿ ಸಮಾಜದ ಕುಂದು ಕೊರತೆಗಳಿಗೆ ಸ್ಪಂದಿಸುವುದು ಮತ್ತು ಅವರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು. ಅವರಿಗೆ ಸರ್ಕಾರದ ವತಿಯಿಂದ ದೊರೆಯಬಹುದಾದ ಸೌಲಭ್ಯಗಳು ನೆರವಾಗಿ ಅವರಿಗೆ ದೊರಕುವಲ್ಲಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಿ.ಸೋಮಣ್ಣ, ಬಿ.ಮಹಾಲಿಂಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮುಸುಂದರ್ ಮಲ್ಲಯ್ಯನಪುರ, ಗ್ರಾ.ಪಂ.ಸದಸ್ಯ ರವಿ, ಮುಖಂಡರಾದ ಸುರೇಶ್, ವೃಷಬೇಂದ್ರಪ್ಪ, ನಾಗರತ್ನ, ಮಹಾದೇವಿ, ದೇವಮಣಿ, ಪರಿಮಳ, ಮಹೇಶ್ ಕಾಳನಹುಂಡಿ, ಬಸವಣ್ಣ ಉತ್ತುವಳ್ಳಿ, ಬಸವರಾಜು ಕುದೇರು ಇತರರು ಇದ್ದರು.
29ಸಿಎಚ್ಎನ್.5:
ಚಿತ್ರವಿದೆ