ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳದಲ್ಲಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರನ್ ತಮ್ಮ ಡೆತ್ ನೋಟ್ ನಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಬಿ ನಾಗೇಂದ್ರ ಅವರ ಹೆಸರು ಉಲ್ಲೇಖಿಸಿರುವುದರಿಂದ ಸಚಿವನನ್ನು ಸಂಪುಟದಿಂದ ವಜಾ ಮಾಡಬೇಕೆಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ. ಸಿದ್ದರಾಮಯ್ಯ ಸರ್ಕಾರದಿಂದ ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ಇದೇ ಹಿನ್ನೆಲೆಯಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ದಕ್ಷ ಅಧಿಕಾರಿಯ ಸಾವಿಗೆ ಕಾರಣನಾದ ಸಚಿವ ಬಿ ನಾಗೇಶ್ ತೊಲಗಲಿ ಮತ್ತು ಸಚಿವನ ಫೋಟೋವಿದ್ದ ಪ್ಲಕಾರ್ಡ್ ಗಳನ್ನು ಪ್ರದರ್ಶಿಸಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ದೊಡ್ಡ ವ್ಯಾನ್ ನೊಂದಿಗೆ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ಮ ಪಡೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಿತು. ವ್ಯಾನ್ ನಲ್ಲಿದ್ದ ಕಾರ್ಯಕರ್ತರಲ್ಲಿ ಹಲವರು ಮಾಧ್ಯಮಗಳ ಜೊತೆ ಒಟ್ಟಿಗೆ ಮಾತಾಡಲು ಪ್ರಾರಂಭಿಸಿದ್ದರಿಂದ ಯಾರೊಬ್ಬರ ಮಾತೂ ಸ್ಪಷ್ಟವಾಗಿ ಕೇಳಿಸಲ್ಲ.