ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ಕೊಡಬೇಕು. ಇಲಾಖೆ ಸಚಿವನ ರಾಜೀನಾಮೆ ಮಾತ್ರವಲ್ಲ, ಆತನನ್ನು ಬಂಧನ ಆಗಬೇಕು. ವಾಲ್ಮೀಕಿ ನಿಗಮದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಒತ್ತಾಯಿಸಿದರು.
ಆರ್ಥಿಕ ಇಲಾಖೆಗೆ ಗೊತ್ತಿಲ್ಲದೇ ಅಕೌಂಟ್ ಕ್ರಿಯೇಟ್ ಆಗುತ್ತ ? ಆರ್ಥಿಕ ಇಲಾಖೆ ಅನುಮತಿ ಇಲ್ಲದೆ ಕೋಟ್ಯಂತರ ರೂ. ವರ್ಗಾವಣೆ ಆಗುತ್ತ ? ಆರ್ಥಿಕ ಇಲಾಖೆ ಯಾರ ಕೈಯಲ್ಲಿದೆ ? ಎಂದು ಪ್ರೇಶ್ನಿಸಿದರು.
ವಾಲ್ಮೀಕಿ ನಿಗಮದ ಅಧೀಕ್ಷಕ, ಹಾಗೂ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಎರಡೂ ಪ್ರಕರಣ ಸಿಬಿಐಗೆ ವಹಿಸಬೇಕು. ಇಲ್ಲ ನ್ಯಾಯಾಲಯದ ಅಧಿನದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲದೆ ಎಸ್ಐಟಿ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.