ಪೌರಕಾರ್ಮಿಕರಿಗೆ ರಕ್ಷಣಾ ಕವಚಗಳನ್ನು ಒದಗಿಸುವಲ್ಲಿ ಪುರಸಭೆ ನಿರ್ಲಕ್ಷ್ಯ
ದೇವನಹಳ್ಳಿ : ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅಂತವರ ಆರೋಗ್ಯಕ್ಕೆ ಪೂರಕವಾದ ಸುರಕ್ಷಿತ ಕವಚಗಳಾದ ಗ್ಲೌಸ್, ಶೂ ಮತ್ತು ಮಾಸ್ಕ್ ಗಳನ್ನು ಪುರಸಭೆಯು ಒದಗಿಸುವಲ್ಲಿ ವಿಫಲವಾಗಿದೆ ಪೌರಕಾರ್ಮಿಕರ ಆರೋಗ್ಯ ರಕ್ಷಣೆಯನ್ನು ನಿರ್ಲಕ್ಷಿಸಿದಂತಿದೆ.
ಪೌರಕಾರ್ಮಿಕರು ಸ್ವಚ್ಛತೆಯ ಕೆಲಸದ ವೇಳೆಯಲ್ಲಿ ಸುರಕ್ಷಿತಾ ಪರಿಕರಗಳನ್ನು ಧರಿಸಿ ಆರೋಗ್ಯ ಕಾಪಾಡಿಕೊಳ್ಳಲು ಪುರಸಭೆಯು ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪೌರ ಕಾರ್ಮಿಕರು ಸ್ಥಳೀಯ ಸಂಸ್ಥೆಗಳ ಆಧಾರ ಸ್ತಂಭವಾಗಿದ್ದು, ಎಂತಹ ಸಂದಿಗ್ಧ ಪರಿಸ್ಥಿಯಲ್ಲೂ ಆರೋಗ್ಯ ಬದಿಗೊತ್ತಿ ಸ್ವಚ್ಚತಾ ಕಾರ್ಯ ಮಾಡುತ್ತಾರೆ. ಅವರ ಆರೋಗ್ಯ ಕಾಪಾಡುವ ಜವಾಬ್ದಾರಿ ಸ್ಥಳೀಯ ಆಡಳಿತ ಮತ್ತು ಸರ್ಕಾರದ ಮೇಲಿದೆ ಪರಿಸರ ಸ್ವಚ್ಛತೆಯ ಜತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆಯಾಗಿದೆ.
ಸ್ವಚ್ಛತೆಯ ಕುರಿತು ಕಾನೂನು ಜಾರಿಗೆ ಬಂದರೆ ಸಾಲದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು. ನಾವು ಕಣ್ಣುಬಿಡುವ ಮೊದಲೇ ಪಟ್ಟಣವನ್ನು ಸ್ವಚ್ಛಗೊಳಿಸಿ ಮನಸ್ಸಿಗೆ ಮುದ ನೀಡುವ ಕಾರ್ಮಿಕರಿಗೆ ನಾವು ಏನು ಕೊಟ್ಟರೂ ಕಡಿಮೆಯೇ ಆಗಿದೆ. ಏನು ಕೊಡದಿದ್ದರೂ ಪರವಾಗಿಲ್ಲ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಕನಿಷ್ಠ ಗೌರವ ಕೊಡಬೇಕಾಗಿದೆ.
30ಡಿಎಚ್ಎಲ್ ಪಿ -೩
ದೇವನಹಳ್ಳಿ ಪಟ್ಟಣದಲ್ಲಿ ಪೌರಕಾರ್ಮಿಕರು ಯಾವುದೇ ಸುರಕ್ಷಿತ ಕವಚಗಳನ್ನು ಬಳಸದೆ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿರುವುದು.