ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅಭಿಪ್ರಾಯ
ಮಕ್ಕಳ ಮನೆಗೆ ಮಾಜಿ ಶಾಸಕ ಭೇಟಿ
ದೇವನಹಳ್ಳಿ: ಇತ್ತೀಚೆಗೆ ಹಾಸನ ಬಳಿ ಅಪಘಾತದಲ್ಲಿ ಮೃತರಾದ ಮಕ್ಕಳ ನೆರವಿಗೆ ನಾವೆಲ್ಲಾ ಬಂದಿದ್ದೇವೆ. ಮಕ್ಕಳ ಮುಂದಿನ ಆಗುಹೋಗುಗಳಿಗೆ ನಮ್ಮ ಸಂಪೂರ್ಣ ಸಹಕಾರ ನೀಡುತ್ತೇವೆ. ಪೋಷಕರು ಇಲ್ಲವೆಂಬ ಭಾವನೆ ಮಕ್ಕಳಲ್ಲಿ ಬಾರದಂತೆ ಎಲ್ಲರೂ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.
ದೇವನಹಳ್ಳಿ ತಾಲೂಕು ಕಾರಹಳ್ಳಿ ಗ್ರಾಮಕ್ಕೆ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭೇಟಿ ನೀಡಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸಾಂತ್ವನ ಹೇಳಿದರು. ಸರ್ಕಾರದಿಂದ ದೊರೆಯುವ ಹಲವಾರು ಸೌಕರ್ಯಗಳನ್ನು ಜನಪ್ರತಿನಿಧಿಗಳು ಕೊಡಿಸಬೇಕು ಕಷ್ಟಸುಖದಲ್ಲಿ ಭಾಗಿಯಾಗಿ ನೆರವಾಗಬೇಕು ಎಂದರು.
ಮಕ್ಕಳ ತಂದೆ ಪಾರ್ಶ್ವ ವಾಯು ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳುವಾಗ ಮೇ 26 ರಂದು ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರ ಈಚನಹಳ್ಳಿ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತವಾಗಿ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಸಾವಿಗೀಡಾದವರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಕಾರಹಳ್ಳಿ ಗ್ರಾಮದವರಾಗಿದ್ದು ಅವರ ಮಕ್ಕಳು ತಬ್ಬಲಿಗಳಾಗಿದ್ದು ಸ್ಥಳೀಯ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮನೆಗೆ ಆಗಮಿಸಿ ಸಾಂತ್ವನ ಹೇಳಿ ಐವತ್ತು ಸಾವಿರ ಧನ ಸಹಾಯ ಮಾಡಿದರು.
ಈ ಘಟನೆ ನಡೆದು ನಾಲ್ಕು ದಿನ ಕಳೆದರೂ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಕ್ಕಳ ಯೋಗಕ್ಷೇಮ ವಿಚಾರಿಸದ ಮತ್ತು ಅವರ ನೆರವಿಗೆ ಬಾರದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತಿದೆ. ಆದ್ದರಿಂದ ಶೀಘ್ರದಲ್ಲಿಯೇ ಸಚಿವರು ಮಕ್ಕಳಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ಒದಗಿಸಿ ನಮ್ಮ ಸಾಂತ್ವನದ ಮೂಲಕ ಧೈರ್ಯ ತುಂಬಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಕಾರಹಳ್ಳಿ ಗ್ರಾ ಪಂ ಅಧ್ಯಕ್ಷ ರಮೇಶ್ , ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ದೇವರಾಜ್, ಕಾರಹಳ್ಳಿ ವಿ.ಎಸ್.ಎಸ್.ಎನ್ ಅಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯತಿ ಸದಸ್ಯ ರಾಜೇಂದ್ರ, ತಾ ಪಂ ಮಾಜಿ ಸದಸ್ಯ ಶ್ರೀನಿವಾಸ್, ಮುಖಂಡರಾದ ಮುನಿಕೃಷ್ಣ ಇದ್ದರು.
30ಡಿಎಚ್ಎಲ್ ಪಿ -೧
ದೇವನಹಳ್ಳಿ ತಾಲ್ಲೂಕು ಕಾರಹಳ್ಳಿ ಗ್ರಾಮಕ್ಕೆ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭೇಟಿ ನೀಡಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸಾಂತ್ವನ ಹೇಳಿದರು.