ಹುಣಸೂರು: ವಿಧಾನಪರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದರ ಪರ ಶಾಸಕ ಜಿ.ಡಿ.ಹರೀಶ್ಗೌಡ ಶನಿವಾರ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.
ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿದ ನಂತರ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ. ಶಿಕ್ಷಕರ ಹಲವಾರು ಸಮಸ್ಯೆಗೆಳು ದಶಕದಿಂದ ಪರಿಹಾರ ಕಾಣದೇ ನೆನೆಗುದಿಗೆ ಬಿದ್ದಿದೆ. ಇದೀಗ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಮತದಾನದ ಹಕ್ಕನ್ನು ರದ್ದುಗೊಳಿಸಿರುವುದು ಪ್ರಜಾತಂತ್ರ ವಿರೋಧಿ ಕ್ರಮವಾಗಿದೆ. ಶಿಕ್ಷಕರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಮೈತ್ರಿ ಪಕ್ಷಗಳು ಬದ್ದವಾಗಿದೆ. ಶಿಕ್ಷತರ ಮತದಾನದಲ್ಲಿ ಕುಲಗೆಟ್ಟ ಮತಗಳ ಸಂಖ್ಯೆ ಹೆಚ್ಚುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಆ ರೀತಿ ಆಗದಂತೆ ಕ್ರಮವಹಿಸಿರಿ. ಮೈತ್ರಿ ಅಭ್ಯರ್ಥಿಗೆ ಪ್ರಥಮಪ್ರಾಶಸ್ತದ ಮತ ನೀಡಬೇಕೆಂದು ಕೋರಿದರು.
ಈ ವೇಳೆ ಪಕ್ಷದ ಮುಖಂಡರಾದ ನಗರಸಭೆ ಸದಸ್ಯ ಶ್ರೀನಾಥ್, ಜಿ.ಪಂ.ಮಾಜಿ ಸದಸ್ಯ ಎಂ.ಬಿ.ಸುರೇಂದ್ರ, ಹರವೆ ಶ್ರೀಧರ್, ಸತೀಶ್ ಪಾಪಣ್ಣ, ತಟ್ಟೆಕೆರೆ ಶ್ರೀನಿವಾಸ್ ಇತರರು ಇದ್ದರು.
೧ಊUಓ೨: ಹುಣಸೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಶಾಸಕ ಜಿ.ಡಿ.ಹರೀಶ್ಗೌಡ ಉಪನ್ಯಾಸಕರಲ್ಲಿ ಮತಯಾಚನೆ ನಡೆಸಿದರು. ನಗರಸಭಾ ಸದಸ್ಯ ಶ್ರೀನಾಥ್, ಎಂ.ಬಿ.ಸುರೇಂದ್ರ, ಸತೀಶ್ ಪಾಪಣ್ಣ, ಕಾಲೇಜು ಸಿಡಿಸಿ ಉಪಾಧ್ಯಕ್ಷ ಮೋದೂರು ಮಹೇಶಾರಾಧ್ಯ, ಅಧ್ಯಾಪಕ ವೃಂದ ಇದ್ದಾರೆ.
Leave a comment