ಪ್ರಗತಿ ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಕಾರ್ಯಕ್ರಮ
ದೇವನಹಳ್ಳಿ/ವಿಜಯಪುರ: ಸಂಪತ್ತು ಗಳಿಕೆಗಿಂತ ಪರಿಸರ ಸಂರಕ್ಷಣೆಗೆ ಒತ್ತು ನೀಡಿ ಎಂದು ಪ್ರಗತಿ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಕೃಪಾಶಂಕರ್ ತಿಳಿಸಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರತಿ ವರ್ಷದಂತೆ ನಮ್ಮ ಶಾಲೆ ವತಿಯಿಂದ ಒಂದೊಂದು ತೀಮ್ ತೆಗೆದುಕೊಂಡು ಪರಿಸರದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.
ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಪೂರ್ತಿ ಮಾತನಾಡಿ, ಸ್ವಚ್ಛ ಭೂಮಿ ನಮ್ಮೆಲ್ಲರ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ನಾವು ಬಂದಿದ್ದೇವೆ. ನಾವು ರಜೆಗಳಲ್ಲಿ ಐತಿಹಾಸಿಕ ತಾಣಗಳಿಗೆ ತೆರಳಿದಾಗ ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಪರಿಸರವನ್ನು ನಾವು ಉಳಿಸಿದರೆ ನಾವು ಉಳಿಯ ಬಹುದು ಇಲ್ಲವಾದರೆ ನಮಗೆ ತೊಂದರೆ ಆಗುತ್ತದೆ ಎಂದರು.
ಶಾಲೆಯ ಮಕ್ಕಳು ಬಸ್ ನಿಲ್ದಾಣದಲ್ಲಿ ಇರುವ ಬಸ್ ಗಳಿಗೆ ಹೋಗಿ ಪರಿಸರದ ಬಗ್ಗೆ ಸಾರ್ವಜನಿಕರಿಗೆ ಭಿತ್ತಿ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿದರು.
ಪ್ರಗತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ವಿ.ಬಸವರಾಜ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಪ್ರಕಾಶ್, ಕೆ.ಎಸ್.ಆರ್.ಟಿ.ಸಿ ವಿಜಯಪುರ ಶಾಖೆಯ ಅಧಿಕಾರಿ ಶ್ರೀನಿವಾಸ್, ಬಿ.ಎಂ.ಟಿ.ಸಿ ವಿಜಯಪುರ ಅಧಿಕಾರಿ ಕಣ್ಣಪ್ಪ, ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ನಾರಾಯಣಸ್ವಾಮಿ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
5ಡಿಎಚ್ಎಲ್ ಪಿ -೪
ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಗತಿ ಪ್ರೌಢಶಾಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು.