ನವದೆಹಲಿ: ನರೇಂದ್ರ ಮೋದಿ ಅವರ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಕರ್ನಾಟಕದ ಮೂವರು ಸಂಸದರೂ ಮೋದಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಹೌದು.. ಈ ಬಾರಿ ರಾಜ್ಯದ ನಾಲ್ವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದ್ದು, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಎಚ್.ಡಿ.ಕುಮಾರಸ್ವಾಮಿ, ವಿ ಸೋಮಣ್ಣ ಹೆಸರು ಸಂಭಾವ್ಯರ ಪಟ್ಟಿಯಲ್ಲಿದೆ. ಇನ್ನು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಬ್ರದರ್ಸ್ ವಿರುದ್ಧ ಗೆದ್ದು ಭಾರೀ ಸದ್ದು ಮಾಡುತ್ತಿರುವ ಡಾ ಮಂಜುನಾಥ್ ಅವರಿಗೂ ಸಚಿವ ಖಚಿತ ಎನ್ನಲಾಗಿತ್ತು. ಆದ್ರೆ, ಇದೀಗ ಬಂದ ಮಾಹಿತಿ ಪ್ರಕಾರ ಡಾಕ್ಟರ್ ಮಂಜುನಾಥ್ ಅವರ ಹೆಸರು ಸಂಭಾವ್ಯರ ಸಚಿವರ ಪಟ್ಟಿಯಲ್ಲಿಲ್ಲ.
ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ
ಈ ಬಾರಿ ಆರಂಭದಲ್ಲೇ ಕರ್ನಾಟಕದ ನಾಲ್ವರಿಗ ಮೋದಿ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ, ಮಂಡ್ಯದಿಂದ ಗೆದ್ದಿರುವ ಎಚ್ಡಿ ಕುಮಾರಸ್ವಾಮಿ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಕೇಂದ್ರ ಕ್ಯಾಬಿನೆಟ್ ಸಚಿವರಾಗುವುದು ಪಕ್ಕ ಎನ್ನಲಾಗಿದೆ. ಜೋಶಿ ಕಳೆದ ಬಾರಿಯೂ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ಇದೀಗ ಮತ್ತೊಮ್ಮೆ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಕಳೆದ ಬಾರಿ ಕೃಷಿ ರಾಜ್ಯ ಖಾತೆ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಸಹ ಈ ಬಾರಿಯೂ ಸಹ ಮತ್ತೆ ರಾಜ್ಯ ಖಾತೆ ಸಚಿವೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಬಂದ ಮಾಹಿತಿ ಪ್ರಕಾರ ವಿ ಸೋಮಣ್ಣಗೂ ಬಂಪರ್ ಗಿಫ್ಟ್ ಸಿಕ್ಕಿದೆ, ವಿಧಾನಸಭೆಯಲ್ಲಿ ಸೋತು ತುಮಕೂರು ಲೋಕಸಭಾದಿಂದ ಗೆದ್ದಿರುವ ಸೋಮನ್ಣ ಕೇಂದ್ರ ಸಚಿವರಾಗುವುದು ಖಚಿತವಾಗಿದೆ.
ಕೇಂದ್ರ ಸಂಪುಟ ಸೇರಲಿರುವ ಸಂಭವನೀಯ ಸಚಿವರ ಪಟ್ಟಿ
ಅಮಿತ್ ಶಾ, ಮನ್ಸುಖ್ ಮಾಂಡವಿಯಾ, ಅಶ್ವಿನಿ ವೈಷ್ಣವ್, ನಿರ್ಮಲಾ ಸೀತಾರಾಮನ್, ಪಿಯೂಶ್ ಗೊಯಲ್, ಜಿತೇಂದ್ರ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್, ಹರ್ದೀಪ್ ಸಿಂಗ್ ಪುರಿ, H.D.ಕುಮಾರಸ್ವಾಮಿ, ಚಿರಾಗ್ ಪಾಸ್ವಾನ್, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ. ಕಿರಣ್ ರಿಜುಜು, ಗಿರಿರಾಜ್ ಸಿಂಗ್, ಜಯಂತ್ ಚೌಧರಿ, ಅಣ್ಣಾಮಲೈ, ಮನೋಹರ್ ಲಾಲ್ ಖಟ್ಟರ್, ಸುರೇಶ್ ಗೋಪಿ, ಜಿತನ್ ರಾಮ್ ಮಾಂಜಿ, ರಾಮನಾಥ್ ಠಾಕೂರ್, ಕಿಶನ್ ರೆಡ್ಡಿ, ಬಂಡಿ ಸಂಜಯ್, ಅರ್ಜುಮ್ ರಾಮ್ ಮೇಘವಾಲ್, ಪ್ರಹ್ಲಾದ್ ಜೋಶಿ, ಚಂದ್ರಶೇಖರ್ ಚೌಧರಿ, ಚಂದ್ರಶೇಖರ್ ಪೆಮ್ಮಸಾನಿ, ರಾಮ್ ಮೋಹನ್ ನಾಯ್ಡು, ರವ್ನೀತ್ ಸಿಂಗ್, ಜಿತಿನ್ ಪ್ರಸಾದ್, ಪಂಕಜ್ ಚೌಧರಿ, ಬಿ.ಎಲ್.ವರ್ಮಾ. ಲಲನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಅನುಪ್ರಿಯಾ ಪಟೇಲ್, ಪ್ರತಾಪ್ ರಾವ್ ಜಾಧವ್. ಅನ್ನಪೂರ್ಣದೇವಿ, ರಕ್ಷಾ ಖಡ್ಸೆ, ಶೋಭಾ ಕರಂದ್ಲಾಜೆ.