ನಾಪೋಕ್ಲು : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಠಾರದಲ್ಲಿ ವಿವಿಧ ತಳಿಯ ಮರದ ಸಸಿ ನೆಡಲಾಯಿತು. ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಿತು.
ಶಾಲೆಯ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಕೆ.ಎ.ಹಾರಿಸ್ ಗಿಡ ನೆಟ್ಟು ಮಾತನಾಡಿ, ತಾಪಮಾನ ಏರಿಕೆಗೆ ಪರಿಸರ ನಾಶವೇ ಮೂಲ ಕಾರಣವಾಗಿದೆ. ಪ್ರತಿದಿನ ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ವಹಿಸಿಕೊಂಡು ಪ್ಲಾಸ್ಟಿಕ್ ಪರಿಸರಕ್ಕೆ ಸೇರದ ಹಾಗೆ ನಿಯಂತ್ರಿಸಬೇಕು ಎಂದರು.
ಶಾಲೆಯ ಶಿಕ್ಷಕ ಮಾದೇಶ್, ಪ್ರಭಾರ ಉಪ ಪ್ರಾಂಶುಪಾಲ ಎಂ.ಎಸ್.ಶಿವಣ್ಣ, ಮೇಲುಸ್ತುವಾರಿ ಸಮಿತಿ ಸದಸ್ಯರಾದ ಕೀಕಂಡ ರಾಜ ಮೇದಪ್ಪ, ಕೇಟೋಳಿರ ರಾಜ ಗಣಪತಿ, ಜಸಿಕಾ, ಶಾಲೆಯ ಶೈಕ್ಷಣಿಕ ಗುಣಮಟ್ಟ ಖಾತರಿ ಸಮಿತಿ ಅಧ್ಯಕ್ಷ ಎನ್.ಎಸ್.ಉದಯಶಂಕರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಚಂದ್ರಕಲಾ ಇದ್ದರು.
ಫೋಟೋ 9 ಎಂಡಿಕೆ 05 ; ನಾಪೋಕ್ಲುಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಗಿಡ ನೆಡಲಾಯಿತು.