ವಿರಾಜಪೇಟೆ: ಕಳೆದ ೪೪ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವಿರಾಜಪೇಟೆ ಕಾವೇರಿ ಕಾಲೇಜಿನ ೯.೧೦ ಏಕರೆ ಜಾಗದ ಆರ್.ಟಿ.ಸಿಯನ್ನು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಪ್ರಾಂಶುಪಾಲ ಬೆನೆಡಿಕ್ಟ್ ಸಾಲ್ಡಾನ ಅವರಿಗೆ ಹಸ್ತಾಂತರಿಸಿದರು.
ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಕಳೆದ ೪೪ ವರ್ಷಗಳಿಂದ ಕಾಲೇಜು ಜಾಗ ಮತ್ತು ಕಟ್ಟಡಗಳಿಗೆ ಯಾವುದೇ ದಾಖಲಾತಿ ಇರಲಿಲ್ಲ. ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ದಾಖಲಾತಿ ಇಲ್ಲದ ವಿಚಾರವನ್ನು ನನ್ನ ಗಮನಕ್ಕೆ ತಂದಾಗ ನೇರವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸ್ಥಳ ಪರಿಶೀಲನೆ ನಡೆಸಿ ಜಾಗದ ಆರ್.ಟಿ.ಸಿ.ಕಾಲೇಜಿನ ಹೆಸರಿಗೆ ಮಾಡಿಕೊಡಲಾಗಿದೆ ಎಂದು ಹೇಳಿದರು.
ಉಪ ಪ್ರಾಂಶುಪಾಲೆ ಕೆ.ಜಿ.ವೀಣಾ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.
ಪೋಟೋ ೧೧ ವಿಟಿಪಿ ೧ ಕಾವೇರಿ ಕಾಲೇಜಿನ ಆರ್.ಟಿ.ಸಿ ವಿತರಣೆ.