ಪ್ರತಿನಿಧಿ ವರದಿ ಕೊಳ್ಳೇಗಾಲ
ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಂಧಿತ ಆರೋಪಿ ಚಿತ್ರನಟ ದರ್ಶನ್ ಹಾಗೂ ಆತನ ಇತರ ಸಹಚರರನ್ನು ರಾಜ್ಯ ಸರ್ಕಾರ ಉಗ್ರವಾದ ಶಿಕ್ಷೆಗೊಳಪಡಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕೊಳ್ಳೇಗಾಲ ತಾಲೂಕು ಘಟಕ ಆಗ್ರಹಿಸಿದೆ.
ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎನ್ನಲಾದ ದರ್ಶನ್ ಹಾಗೂ ಆತನ ಸಹಚರರನ್ನು ಪೊಲೀಸ್ ಇಲಾಖೆ ಈಗಾಗಲೇ ದಿಟ್ಟತನದಿಂದ ಬಂಧಿಸಿರುವುದು ಶ್ಲಾಘನೀಯ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ಬಿ.ಮಹಾದೇವಪ್ರಸಾದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ಕುರಿತು ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ಸಂಜೆ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಮೃತ ರೇಣುಕಾಸ್ವಾಮಿ ಸಾವಿಗೆ ಸಂತಾಪ ಸೂಚಿಸಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅಧ್ಯಕ್ಷರು, ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ ಉಗ್ರ ಹೋರಾಟ ಮಾಡಲು ಘಟಕ ನಿರ್ಧರಿಸಿದೆ. ಅಂತೆಯೇ, ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಭೆಯಲ್ಲಿ ಪದಾಧಿಕಾರಿಗಳಾದ ಎನ್.ರಾಜು, ಎಂ.ಪಿ.ಇಂದ್ರ, ಜಿ.ವೀರಭದ್ರಸ್ವಾಮಿ, ಸಿ.ಮಹದೇವಪ್ರಸಾದ್, ಎಸ್.ಪ್ರಭಾಕರ್, ಎಸ್.ಮಹೇಶ್, ಬಾಲಸುಬ್ರಹ್ಮಣ್ಯಸ್ವಾಮಿ, ಎಂ.ಮಹೇಶ್, ಜಿ.ಎಂ.ಬಸಪ್ಪ, ಬಿ.ಪ್ರಭುಸ್ವಾಮಿ, ಎನ್.ಮಂಜುನಾಥ್, ನಟೇಶ್ ಸೇರಿದಂತೆ ಇತರರು ಇದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
14ಕೆಜಿಎಲ್-1
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ತಾಲೂಕು ಘಟಕದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಬಿ.ಮಹಾದೇವಪ್ರಸಾದ್ ಫೋಟೋ ಹಾಗೂ ಪತ್ರಿಕಾ ಹೇಳಿಕೆ ಪ್ರತಿ ಇದೆ