ವಿರಾಜಪೇಟೆ: ಜೂ.19 ರಿಂದ ಜನರ ಅಹವಾಲು ಸ್ವೀಕರಿಸಲು ಜನ ಸ್ಪಂದನ ಪರ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಜೂ.19 ರಂದು ವಿರಾಜಪೇಟೆ ಪಟ್ಟಣಕ್ಕೆ ಸಂಭಂದಿಸಿದಂತೆ ಜನರ ಅಹವಾಲು ಆಲಿಸಲಾಗುವುದು. ನಂತರ ಪ್ರತಿ ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಆಯಾ ಭಾಗಕ್ಕೆ ಸಂಬಂಧಿಸಿದ ನಾಗರಿಕರು ಭಾಗವಹಿಸಬಹುದು ಎಂದು ವಿನಂತಿ ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಹಿರಿಯ, ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಜನರ ಸಮಸ್ಯೆ ಬಗೆ ಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಯಲಿದೆ. ಜನಪ್ರತಿನಿಧಿಯಾಗಿ ಅಯ್ಕೆಯಾದವರು ತಮ್ಮ ಭೇಟಿಗೆ ಬರಲಿ ಎಂದು ಕಾಯುವುದರ ಬದಲು ಜನರ ಬಳಿ ತೆರಳಿ ಅವರ ಸಮಸ್ಯೆ ಆಲಿಸಿ ಬಗೆಹರಿಸಿದರೆ ಮಾತ್ರ ನೈಜ ಪ್ರಜಾಪ್ರಭುತ್ವ ಕಾಣಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಫೋಟೋ 15 ಎಂಡಿಕೆ 04 ;ಎ. ಎಸ್. ಪೊನ್ನಣ್ಣ