ಪ್ರತಿನಿಧಿ ವರದಿ ಹಾಸನ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಸೇವಾಭಾರತಿ, ಹಾಸನ ಜಿಲ್ಲೆಯ ಸೇವಾಧಾಮ ಹಾಗೂ ಬೆಂಗಳೂರಿನ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸ್ಟೆಬಿಲಿಟಿ ಇವರ ಆಶ್ರಯದಲ್ಲಿ ವಸತಿಯುತ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಾಲಿ ಕುರ್ಚಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಜೂ.20 ರಿಂದ ಮೂರು ದಿನಗಳ ಕಾಲ ನಗರದ ರಾಜೀವ್ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಶಿಬಿರ ನಡೆಯಲಿದ್ದು, ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರಿಗಾಗಿ ಆಯೋಜಿಸಲಾಗಿದೆ ಎಂದು ಸೇವಭಾರತಿ ವ್ಯವಸ್ಥಾಪಕ ಚರಣ್ ತಿಳಿಸಿದರು.
2004ರಲ್ಲಿ ಸ್ಥಾಪಿತವಾದ ಸೇವಭಾರತಿ, ಅಂದಿನಿಂದ ಮಹಿಳಾ ಸಬಲೀಕರಣ, ಸ್ವ-ಉದ್ಯೋಗದ ಮೂಲಕ ದಿವ್ಯಾಂಗರ ಕ್ಷೇತ್ರದಲ್ಲಿ ಸಾಮಾಜಿಕ ಸೇವಾಕಾರ್ಯ ಹಾಗೂ ಸಮುದಾಯ ಸೇವೆ ಮಾಡಿಕೊಂಡು ಬರುತ್ತಿದೆ. 2018 ರಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗೆ ಪುನಶ್ಚೇತನ ಕೇಂದ್ರ ಆರಂಭಿಸಿ, ಪುನಶ್ವೇತನ ನೀಡುವ ಕಾರ್ಯವನ್ನು ನಿರಂತರವಾಗಿ ನಮ್ಮ ಸಂಸ್ಥೆ ಮಾಡುತ್ತಾ ಬರುತ್ತಿದೆ ಎಂದರು.
ಸಂಘಟನಾ ಕಾರ್ಯದರ್ಶಿ ಗಿರೀಶ್, ಮಂಜುನಾಥ್, ನಾಗಾರ್ಜುನ ಇದ್ದರು.