- ಶಾಸಕ ಎಚ್.ಕೆ.ಸುರೇಶ್ ಹೇಳಿಕೆ
- ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಸಾಮಾನ್ಯಸಭೆ
ಪ್ರತಿನಿಧಿ ವರದಿ ಬೇಲೂರು
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಪೂರ್ಣ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆ ಬೇಲೂರು ಕ್ಷೇತ್ರದಲ್ಲಿ ನಡೆಯುತ್ತಿದೆ. ಕೆಲವು ಭಾಗದಲ್ಲಿ ಗುಣಮಟ್ಟವಿಲ್ಲದ ಕಾಮಗಾರಿ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಯಾವುದೇ ಮುಲಾಜಿಲ್ಲದೆ ನೋಟೀಸ್ ನೀಡಿ ಅವರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೆ ಪತ್ರ ಬರೆಯಲಾಗುತ್ತದೆ ಎಂದು ಶಾಸಕ ಎಚ್.ಕೆ.ಸುರೇಶ್ ಎಚ್ಚರಿಕೆ ನೀಡಿದರು.
ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಸಾಮಾನ್ಯಸಭೆಯನ್ನು ಶಾಸಕ ಎಚ್.ಕೆ.ಸುರೇಶ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಪಟ್ಟಣದ ಹೃದಯ ಭಾಗದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆವಾರು ಅಧಿಕಾರಿಗಳ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು.
ಜೆಜೆಎಂ ಯೋಜನೆಯಲ್ಲಿ ನಿರ್ಮಿಸಿದ ಬಹುತೇಕ ಟ್ಯಾಂಕ್ ಕಾಮಗಾರಿ ಅಸಮಾಪರ್ಕದಿಂದ ಕೂಡಿದೆ. ಈ ವಿಚಾರದಲ್ಲಿ ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಕೂಡ ಪರಿಶೀಲನೆ ನಡೆಸುವ ಮೂಲಕ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕಿದೆ. ಕಾಮಗಾರಿ ನಡೆಯುವ ಹಲವು ಕಡೆಗಳಲ್ಲಿ ಪೈಂಪ್ ಕತ್ತರಿ ಅಸ್ವಚ್ಛತೆ ತಾಣವಾಗಿ ಅನಾರೋಗ್ಯಕ್ಕೆ ಕಾರಣವಾಗುವ ನಿಟ್ಟಿನಲ್ಲಿ ಉತ್ತಮ ಕಾಮಗಾರಿ ನಡೆಸಬೇಕಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನಲ್ಲಿ ನಡೆಯುವ ಕೆಲಸ ಕಾಮಗಾರಿಗಳಿಗೆ ಮೊದಲು ಸ್ಥಳೀಯರಿಗೆ ಅವಕಾಶ ಕಲ್ಪಿಸಬೇಕಿದೆ. ಅಲ್ಲದೆ ಪಶು ಇಲಾಖೆಯಲ್ಲಿ ಬೇಕಾಬಿಟ್ಟಿ ಸವಲತ್ತುಗಳನ್ನು ಹಂಚಿಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ. ಶಾಸಕರ ಗಮನಕ್ಕೆ ತರದೆ ಇಲಾಖೆ ಅಧಿಕಾರಿಗಳು ಸವಲತ್ತುಗಳನ್ನು ವ್ಯಾಪಾರ ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆಲ ಅಂಗನವಾಡಿ ಕಾರ್ಯಕರ್ತರಿಗೆ ಇಲ್ಲಿನ ಸೂಪರ್ ವೈಸರ್ ಗಳು ವಿನಾಃ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವಿದೆ. ಇಂತಹ ಸಂದರ್ಭ ಮತ್ತೆ ಮರುಕಳಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಅಂಗನವಾಡಿ ಮೇಲ್ವಾಚಾರಕರಿಗೆ ಎಚ್ಚರಿಕೆ ನೀಡಿದರು. ಅರಣ್ಯ ಇಲಾಖೆ ಎಲ್ಲೆಂದರಲ್ಲಿ ಗಿಡ ಮರಗಳನ್ನು ನೆಟ್ಟು ಪೇಪರ್ ಅಂಕಿ ಅಂಶ ನೀಡಿದರೆ ಸಾಲದು ನಾನೇ ಬರುತ್ತನೆ ಖುದ್ದು ಪರಿಶೀಲನೆ ನಡೆಸಲಾಗುತ್ತದೆ ಎಂದರು. ಮಲೆನಾಡು ಭಾಗದಲ್ಲಿ ಕಾಡಾನೆ ಬಗ್ಗೆ ಕನಿಷ್ಠ ಮಾಹಿತಿಯನ್ನು ಬೆಳೆಗಾರರಿಗೆ ನೀಡದೆ ಕೇವಲ ವಾಟ್ಸಪ್ ಹಾಕಿಕೊಂಡು ಕುಳಿತಿಕೊಂಡರೆ ಸಾಲದು ಅವರಿಗೆ ಆತ್ಮವಿಶ್ವಾಸ ಮೂಡಿಸುವ ಜೊತೆಗೆ ಕಾಡಾನೆ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಸೂಚನೆ ನೀಡಿದರು.
ಕಳೆದ ಒಂದು ವರ್ಷದಿಂದ ಅಧಿಕಾರಿಗಳು ಸರ್ಕಾರದ ಗ್ಯಾರೆಂಟಿ ಯೋಜನೆ ಪೂರ್ಣಗೊಳಿಸಲು ಕಾಲ ಕಳೆದಂತೆ ಚುನಾವಣೆ ನೀತಿ ಸಂಹಿತೆಯಿಂದ ಸಾರ್ವಜನಿಕರ ಯಾವುದೇ ಒಂದು ಕೆಲಸ ನಡೆದಿಲ್ಲ. ವಿಳಂಭ ಧೋರಣೆ ಎದ್ದು ಕಾಣುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಅಪಾರ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಾನೇ ಇಲಾಖೆವಾರು ಕಚೇರಿಗೆ ಖುದ್ದು ಭೇಟಿ ನೀಡುವ ಬಗ್ಗೆ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವನ್ನು ಮಂತ್ರಿಗಳ ಶಿಪಾರಸ್ಸು ಮೇಲೆ ನೀಡುವುದಾರೆ ನಾನು ವಿಧಾನಸೌಧದಲ್ಲಿ ಈ ಬಗ್ಗೆ ಪ್ರಶ್ನೆ ಮಾಡುವೆ. ವಿಶೇಷವಾಗಿ ತಾಲೂಕಿನ ವಸತಿ ಶಾಲೆಯ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಬಗ್ಗೆ ನಮಗೆ ಚುನಾವಣೆ ನೀತಿ ಸಂಹಿತೆ ಎಂದು ತಿಳಿಸಿಲ್ಲ ಎಂದರು.
ಸಾಮಾನ್ಯ ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಡಾ.ಕೆ.ಆರ್.ರಮೇಶ್, ಕಾರ್ಯಾನಿರ್ವಾಹಠಾಧಿಕಾರಿ ಸತೀಶ್ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು.
ಬಾಕ್ಸ್ ನ್ಯೂಸ್…………..
ಅಧಿಕಾರಿ ವಿರುದ್ಧ ಶಾಸಕ ತಾಕೀತು
ಕಾರ್ಮಿಕ ಇಲಾಖೆಯಲ್ಲಿ ಸಾವಿರಾರು ಕೋಟಿ ಬಡ ಕಾರ್ಮಿಕರಿಗೆ ನೀಡಬೇಕು ಎಂಬ ನಿಯಮವಿದೆ. ಆದರೆ ಬೇಲೂರು ಅಧಿಕಾರಿ ಮಾತ್ರ ನಿಮ್ಮಪ್ಪನದು ಕೊಡುವಂತೆ ಕಾರ್ಮಿಕರಿಗೆ ಸವಲತ್ತುಗಳನ್ನು ನೀಡುವಲ್ಲಿ ಉಡಾಫೆ ವರ್ತನೆ ಅನುಸರಣೆ ಮಾಡುತ್ತಿದ್ದಾರೆ ಎಂದು ಶಾಸಕ ಹೆಚ್.ಕೆ.ಸುರೇಶ್, ಕಾರ್ಮಿಕ ಇಲಾಖೆ ಅಧಿಕಾರಿ ವಿಜಯಕುಮಾರ್ ವಿರುದ್ಧ ತಾಕೀತು ಮಾಡಿದರು.