ಪ್ರತಿನಿಧಿ ವರದಿ ಚನ್ನರಾಯಪಟ್ಟಣ
ತಾಲೂಕಿನ ಆನೆಗೊಳ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಂಡಳಿಯ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡರ ಮಾರ್ಗ ದರ್ಶನದಂತೆ ಐಕನಹಳ್ಳಿ ಗ್ರಾಮದ ಉದಯ್ ಶಂಕರ್ ರವರನ್ನು ಹೊರತು ಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ಉದಯ್ ಶಂಕರ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಉದಯ್ ಶಂಕರ್ ಮಾತನಾಡಿ, ಸರ್ವ ನಿರ್ದೇಶಕರ ಸಹಕಾರದೊಂದಿಗೆ ಆನೆಗೊಳ ಕೃಷಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದರು. ನೂತನ ಅಧ್ಯಕ್ಷರಿಗೆ ಬೆಂಬಲಿಗರು ಹಾಗೂ ಹಿತೈಷಿಗಳು ಸಿಹಿ ಸಿನ್ನಿಸಿ ಶುಭ ಕೋರಿದರು.
ಕರ್ನಾಟಕ ಸಹಕಾರ ಮಹಾ ಮಂಡಳಿಯ ನಿರ್ದೇಶಕ ಪುಟ್ಟಸ್ವಾಮಿಗೌಡ, ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕ ಬಿ.ಎಸ್.ಮಂಜುನಾಥ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಐಕನಹಳ್ಳಿ ಕೃಷ್ಣಗೌಡ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಜೆ.ಡಿ.ಎಸ್ ಯುವ ಘಟಕದ ಹೋಬಳಿ ಅಧ್ಯಕ್ಷಕೆ ಆರ್ ವೆಂಕಟೇಶ್, ಆನೆಗೊಳ ಗ್ರಾಪಂ ಅಧ್ಯಕ್ಷೆ ಮಹಾಲಕ್ಷ್ಮಿ ವಿಶ್ವನಾಥ್, ಉಪಾಧ್ಯಕ್ಷ ನಂಜೇಶ್, ಮಾಜಿ ಉಪಾಧ್ಯಕ್ಷ ರಮೇಶ್, ಮುಖಂಡರಾದ ದೇವರಾಜು, ನಾಗೇಶ್, ಬಿ.ರಾಮೇಗೌಡ್ರು, ನಂಜುಂಡೇಗೌಡ, ಶಿಶುಪಾಲು, ಐಕನಹಳ್ಳಿ ದೇವೇಗೌಡ್ರು, ಐನೋರಹಳ್ಳಿ ಮಂಜು, ಕೃಷಿ ಪತ್ತಿನ ಸಹಕಾರ ಸಂಘದ ಎಲ್ಲಾ ನಿರ್ದೇಶಕರು, ಕಾರ್ಯದರ್ಶಿ ಪ್ರಶಾಂತ್ ಹಾಜರಿದ್ದರು.