ಪ್ರತಿನಿಧಿ ವರದಿ ಹಾಸನ
ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹೊಳೆನರಸೀಪುರ ತಾಲೂಕು ಸಂಯಕ್ತಾಶ್ರಯದಲ್ಲಿ ಹಳ್ಳಿ ಮೈಸೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕ ಭವನದ ಶಂಕುಸ್ಥಾಪನಾ ಸಮಾರಂಭ ಜೂ.24ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.
ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಗೌರವಾನ್ವಿತ ಉಪಸ್ಧಿತಿಯನ್ನು ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಉದ್ಘಾಟನೆ ಮಾಡಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ ಮಹದೇವಪ್ಪ, ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ರವರು ಘನ ಉಪಸ್ಧಿತಿಯನ್ನು ವಹಿಸಲಿರುವರು. ಅರಕಲಗೂಡು ಶಾಸಕ ಎ.ಮಂಜು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರ ಸಂಸದ ಶ್ರೇಯಸ್ ಎಂ.ಪಟೇಲ್, ವಿಧಾನಪರಿಷತ್ ಶಾಸಕರಾದ ಡಾ.ಸೂರಜ್ ರೇವಣ್ಣ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಹಳ್ಳಿಮೈಸೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷಕ ಎಂ.ಎನ್.ವಿಶ್ವನಾಥ, ಮತ್ತಿತರರು ಭಾಗವಹಿಸಲಿದ್ದಾರೆ.