ತಪ್ಪು-ಸರಿ
ಪ್ರತಿನಿಧಿ ವರದಿ,ನಂಜನಗೂಡು- ಪ್ರತಿನಿಧಿ ವರದಿ ನಂಜನಗೂಡು
ಹೆಚ್-ಎಚ್
ಜಾಥ-ಜಾಥಾ
ಅಂಚಿಗೆ ತಲುಪುತ್ತಾರೆ ಎಂದು ವಿದ್ಯಾರ್ಥಿಗಳಿಗೆ ‘ಕಿವಿಮಾತು’ ಹೇಳಿದರು.-ಅಂಚಿಗೆ ತಲುಪುತ್ತಾರೆ ಎಂದು ವಿದ್ಯಾರ್ಥಿಗಳಿಗೆ ‘ಎಚ್ಚರಿಕೆ’ ನೀಡಿದರು.
ಸಿಬ್ಬಂದಿಗಳಾದ-ಸಿಬ್ಬಂದಿ
ಪ್ರಾಂಶುಪಾಲರಾದ-ಪ್ರಾಂಶುಪಾಲ
—————————————————————————–
ವೃತ್ತ ನಿರೀಕ್ಷಕ ಚಂದ್ರಶೇಖರ್ ಸಲಹೆ । ಕವಲಂದೆ ಗ್ರಾಮದಲ್ಲಿ ಜಾಗೃತಿ ಜಾಥಾ
ಪ್ರತಿನಿಧಿ ವರದಿ ನಂಜನಗೂಡು
ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ಜಿಲ್ಲಾ ಪೊಲೀಸ್, ಕವಲಂದೆ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ಅಂತಾರಾಷ್ಟ್ರೀಯ ದಿನಾಚರಣೆ ಅಂಗವಾಗಿ ಜನ ಜಾಗೃತಿ ಜಾಥಾಕ್ಕೆ ವೃತ್ತ ನಿರೀಕ್ಷಕ ಚಂದ್ರಶೇಖರ್ ಚಾಲನೆ ನೀಡಿದರು.
ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳು ಹೆಜ್ಜೆ ಹಾಕಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಬಳಿಕ ವೃತ್ತ ನಿರೀಕ್ಷಕ ಚಂದ್ರಶೇಖರ್ ಮಾತನಾಡಿ, ಯುವ ಪೀಳಿಗೆ ಮಾದಕ ವ್ಯಸನಿಗಳಾಗುತ್ತಿದ್ದು, ಇದನ್ನು ಬಳಸಿಕೊಂಡ ಮಾದಕ ವಸ್ತು ಸಾಗಣೆದಾರರು ಇಂತಹ ವಸ್ತುಗಳನ್ನು ಕಳ್ಳ ಸಾಗಣೆ ಮಾಡಿ ದೇಶಕ್ಕೆ ಮಾರಕವಾಗುತ್ತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಯುವಕರು ಮತ್ತು ವಿದ್ಯಾರ್ಥಿಗಳು ಇದರ ವಿರುದ್ಧ ಧ್ವನಿ ಎತ್ತಬೇಕು ಎಂದರು.
ಮಹಿಳೆಯರು ಮಾದಕ ವಸ್ತು ಬಳಕೆ ಮಾಡುವಂಥ ಪ್ರಮಾಣಗಳು ಹೆಚ್ಚಾಗುತ್ತಿವೆ. ಇಂಥ ಸಂದರ್ಭದಲ್ಲಿ ಮಾದಕ ವಸ್ತು ಮಾರಾಟ ಮಾಡುವ ಜಾಲವನ್ನು ಬೇಧಿಸಬೇಕಾಗಿದೆ. ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಣೆ ವಿರುದ್ಧ ಎಚ್ಚೆತ್ತುಕೊಳ್ಳದೆ ಹೋದಲ್ಲಿ ಯುವಪೀಳಿಗೆ ಇದಕ್ಕೆ ದಾಸರಾಗಿ ವಿನಾಶದ ಅಂಚಿಗೆ ತಲುಪುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಆರ್ ಸಿದ್ದರಾಜು, ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತಕೋಳಿ, ಸಿಬ್ಬಂದಿ ಚಂದ್ರು, ರಾಕೇಶ್, ನಾಗು, ಗೃಹ ರಕ್ಷಕ ದಳದ ಎಚ್.ಜಿ. ಮಹೇಶ್ ಭಾಗವಹಿಸಿದ್ದರು.