ಕೆರೆಯಂತಾದ ಗ್ರಾಮದ ಮುಖ್ಯ ರಸ್ತೆ, ಗ್ರಾಮಸ್ಥರ ಆಕ್ರೋಶ
ಮುಖ್ಯಮಂತ್ರಿ ಕ್ಷೇತ್ರವಾಗಿದ್ದರು 15 ವರ್ಷಗಳಿಂದ ರಸ್ತೆ ಡಾಂಬರೀಕರಣ ಕನಸಗಿದೆ
ಪ್ರತಿನಿಧಿ ವರದಿ ನಂಜನಗೂಡು
ಹೆಸರಿಗಷ್ಟೇ ಮುಖ್ಯಮಂತ್ರಿಗಳ ಕ್ಷೇತ್ರವೆಂದು ಹೆಸರು ಪಡೆದುಕೊಂಡಿದೆ. ಆದರೆ, ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ರಸ್ತೆಗಳು ಡಾಂಬರೀಕರಣ ಕಾಣದೇ ದಶಕಗಳೇ ಕಳೆದಿವೆ. ಗ್ರಾಮದ ಮುಖ್ಯರಸ್ತೆ ಕೆರೆಯಂತಾಗಿದ್ದು, ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ರಸ್ತೆಯ ಪಕ್ಕದಲ್ಲಿ ಸರ್ಕಾರಿ ಶಾಲೆ ಇದ್ದು, ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 15 ವರ್ಷಗಳಿಂದ ಈ ರಸ್ತೆಯನ್ನು ಸರಿಪಡಿಸುವಂತೆ ಗ್ರಾಮಸ್ಥರು ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಚುಂಚನಹಳ್ಳಿ ಗ್ರಾಮದ ಬಸ್ ನಿಲ್ದಾಣದಿಂದ ಗ್ರಾಮದ ಒಳಗೆ ಪ್ರವೇಶಿಸುವ ಮುಖ್ಯ ರಸ್ತೆ ಸುಮಾರು 2 ಕಿಲೋ ಮೀಟರ್ ತನಕ ಗುಂಡಿ ಬಿದ್ದು ಸಂಪೂರ್ಣವಾಗಿ ಹಾಳಾಗಿದೆ. ಮಳೆ ಬಂದ ಸಂದರ್ಭದಲ್ಲಿ ಮಳೆ ನೀರು ರಸ್ತೆಯಲ್ಲಿ ತುಂಬಿಕೊಂಡು ಕೆರೆಯಂತಾಗುತ್ತಿದ್ದು, ವಾಹನ ಸವಾರರು ಮತ್ತು ಗ್ರಾಮಸ್ಥರಿಗೆ ಕಿರಿಕಿರಿಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರೇ ಕಳೆದ 15 ವರ್ಷಗಳಿಂದ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೂ ರಸ್ತೆ ಡಾಂಬರೀಕರಣ ಕಂಡಿಲ್ಲ. ಕ್ಷೇತ್ರದ ಶಾಸಕರು ಹಾಗಿರುವ ಮುಖ್ಯಮಂತ್ರಿಗಳು ರಸ್ತೆಯನ್ನು ಡಾಂಬರೀಕರಣ ಮಾಡಿಸಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
——
ಕೋಟ್
15 ವರ್ಷಗಳಿಂದ ರಸ್ತೆ ಡಾಂಬರೀಕರಣ ಕಾಣದೆ ಗುಂಡಿ ಬಿದ್ದು, ಹಳ್ಳ ಕೊಳ್ಳಗಳಿಂದ ಕೂಡಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರಕ್ಕೆ ಒಳಪಡುವ ಗ್ರಾಮವಾಗಿದೆ. ಮಕ್ಕಳು ಶಾಲೆಗೆ ತೆರಳಲು ತುಂಬಾ ತೊಂದರೆಯಾಗಿದ್ದು, ರಸ್ತೆಯನ್ನು ಅಭಿವೃದ್ಧಿಪಡಿಸಬೇಕು.
-ರಮೇಶ್ ಚುಂಚನಹಳ್ಳಿ ಗ್ರಾಮಸ್ಥರು.
ರಸ್ತೆ ಡಾಂಬರೀಕರಣ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಇಷ್ಟು ವರ್ಷ ಕಳೆದರೂ ಕೇವಲ ಎರಡು ಕಿಲೋಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ. ಮುಖ್ಯಮಂತ್ರಿಗಳು ಗಮನ ಹರಿಸಿ ರಸ್ತೆಯನ್ನು ಡಾಂಬರೀಕರಣ ಮಾಡಿಸಬೇಕಿದೆ.
-ಡಿ.ಎಂ.ಮಹದೇವ್, ಗ್ರಾಪಂ ಸದಸ್ಯ
ಚಿತ್ರ -1
ಡಿ ಎಂ ಮಹದೇವ್
ಚಿತ್ರ -2
ರಮೇಶ್
ಚಿತ್ರ -3+4
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಸಾದಾರಣ ಮಳೆಗೂ ಜಲಾವೃತ ಗೊಂಡಿರುವ ರಸ್ತೆ.