ನ್ಯಾಯಾಧೀಶ ಟಿ.ಗೋವಿಂದಯ್ಯ ಅಭಿಪ್ರಾಯ
ಪ್ರತಿನಿಧಿ ವರದಿ ಹುಣಸೂರು
ಶಿಕ್ಷಣ ಪಡೆಯುವುದು ನಿಮ್ಮ ಜನ್ಮಸಿದ್ಧ ಹಕ್ಕು ಎನ್ನುವುದನ್ನು ವಿದ್ಯಾರ್ಥಿಗಳು ಮನಗಾಣಬೇಕೆಂದು ೮ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋವಿಂದಯ್ಯ ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಬಿಳಿಕೆರೆ, ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಬಿಳಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋದಿ ದಿನಾಚರಣೆ ಅಂಗವಾಗಿ ಅರಿವು ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ಪಾಲಕರದ್ದಾಗಿದೆ. ಅಂತೆಯೇ ಮಕ್ಕಳೂ ಕೂಡ ಶಿಕ್ಷಣ ಕಲಿಯುವುದು ನಮ್ಮ ಹಕ್ಕು ಎನ್ನುವುದನ್ನು ಅರಿಯಬೇಕು. ಬಾಲಕಾರ್ಮಿಕರಾಗಿ ದುಡಿಯುವುದು ನಿಮ್ಮ ಕರ್ತವ್ಯವಲ್ಲ. ಮೊದಲು ಶಿಕ್ಷಿತರಾಗಬೇಕು. ಮಕ್ಕಳ ಹಕ್ಕುಗಳ ಕುರಿತು ನೀವು ತಿಳಿದುಕೊಳ್ಳುವುದು ಅಗತ್ಯ. ೧೮ ವರ್ಷದೊಳಗಿನ ಎಲ್ಲ ಮಕ್ಕಳು ಶಿಕ್ಷಣ ಪಡೆದು ಉತ್ತಮ ಸಮಾಜ ನಿರ್ಮಾಣದಲ್ಲಿ ಬಾಗಿಯಾಗಬೇಕು ಎಂದು ತಿಳಿಸಿದರು.
ಹುಣಸೂರು ಉಪವಿಭಾಗಾಧಿಕಾರಿ ಮಹಮದ್ ಹ್ಯಾರಿಸ್ ಸುಮೇರ್ ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕ-ಚಿಕ್ಕ ಕನಸುಗಳನ್ನು ಕಾಣಬಾರದು, ಕನಸುಗಳು ದೊಡ್ಡದಾಗಿರಬೇಕು. ಕನಸು ನನಸಾಗಿಸಲು ಸತತ ಪ್ರಯತ್ನ, ನಿರಂತರ ಅದ್ಯಯನ ಮತ್ತು ಸಾಧಿಸುವ ಛಲ ಮೂಡಿಸಿಕೊಳ್ಳಿರೆಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ವೈ.ಮನು ಪಟೇಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪೂಜಾ ಬೆಳಕೇರಿ ಮಾತನಾಡಿದರು. ಡೆಂಘೆ ಜ್ವರದ ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ ಮಾಹಿತಿ ನೀಡಿದರು. ಕಾರ್ಮಿಕ ಇಲಾಖೆ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಜೇಶ್ ಕೆ. ಜಾದವ್, ಬಿಳಿಕೆರೆ ಠಾಣೆ ಇನ್ಸ್ಪೆಕ್ಟರ್ ಅರಕ್ಷಕಿ ಲೋಲಾಕ್ಷಿ, ತಾಲೂಕು ಕಾರ್ಮಿಕ ನಿರೀಕ್ಷಕ ಟಿ.ವಿ.ಲಕ್ಷ್ಮೀಶ್, ಪಿ.ಡಿ.ಮಲ್ಲಿಕಾರ್ಜುನ್, ತಾಲೂಕು ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀನಿವಾಸ್, ಪ್ರಾಂಶುಪಾಲೆ ಸ್ನೇಹಲತಾ, ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಉತ್ತಪ್ಪ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
೨೮ಊUಓ೨: ಹುಣಸೂರು ತಾಲೂಕು ಬಿಳಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ೮ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋವಿಂದಯ್ಯ ಉದ್ಘಾಟಿಸಿದರು. ನ್ಯಾಯಾಧೀಶರಾದ ಮನು ಬಿ.ವಿ.ಪಾಟೀಲ್, ರಾಜೇಶ್ ಕೆ.ಜಾಧವ್, ಟಿ.ವಿ.ಲಕ್ಷ್ಮೀಶ, ರಾಜೇಶ್ವರಿ, ಸ್ನೇಹಲತಾ ಇತರರಿದ್ದಾರೆ.