ಮಾಜಿ ಶಾಸಕ ಕೆ.ಮಹದೇವ್ ಅಭಿಪ್ರಾಯ
ಪ್ರತಿನಿಧಿ ವರದಿ ಪಿರಿಯಾಪಟ್ಟಣ
ಸಂಘಟನೆಗಳು ಸಮಾಜಮುಖಿ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಕೆ. ಮಹದೇವ್ ತಿಳಿಸಿದರು.
ತಾಲೂಕಿನ ಒಕ್ಕಲಿಗರ ಸಂಘದ ಕಚೇರಿ ಉದ್ಘಾಟನೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ 500 ವರ್ಷಗಳ ಹಿಂದೆಯೇ ಕಟ್ಟಿದ ಬೆಂಗಳೂರು ಇಂದು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಬೆಂಗಳೂರು ಹಾಗೂ ನಮ್ಮ ರಾಜ್ಯದ ಬೆಳವಣಿಗೆಗೆ ಕೆಂಪೇಗೌಡರವರ ಕೊಡುಗೆ ಅಪಾರವಾಗಿದೆ ಎಂದರು. ಒಕ್ಕಲಿಗರ ಸಂಘದ ಕಚೇರಿ ಉದ್ಘಾಟನೆ ಯಾಗುತ್ತಿರುವುದು ಸಂತಸದ ವಿಷಯ. ಒಕ್ಕಲಿಗ ಸಮುದಾಯ ಎಲ್ಲರಿಗೂ ನ್ಯಾಯವನ್ನು ಒದಗಿಸುವ ಸಮುದಾಯವಾಗಿದೆ. ತಾಲೂಕಿನ ಒಕ್ಕಲಿಗ ಸಮುದಾಯದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಬೆಳವಣಿಗೆಗೆ ಶ್ರಮಿಸುವುದು ಸಂಘಟನೆಗಳ ಜವಾಬ್ದಾರಿಯಾಗಿರುತ್ತದೆ ಎಂದರು.
ಮಾಜಿ ನಗರ ಪಾಲಿಕೆ ಸದಸ್ಯ ಹಾಗೂ ಸಂಘದ ಗೌರವಾದ್ಯಕ್ಷ ಪಿ.ಪ್ರಶಾಂತ್ ಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು. ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು. ಒಕ್ಕಲಿಗ ಸಮಾಜದ ಸರ್ವತೋಮುಖ ಬೆಳವಣಿಗೆಯಾಗಬೇಕು ಎನ್ನುವ ಉದ್ದೇಶದಿಂದ ತಾಲೂಕಿನಲ್ಲಿ ಒಕ್ಕಲಿಗರ ಸಂಘವನ್ನು ಪ್ರಾರಂಭ ಮಾಡಲಾಗಿದೆ. ಸಮುದಾಯದ ಕಟ್ಟಕಡೆಯ ವ್ಯಕ್ತಿಯೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಾಮಾಜಿಕವಾಗಿ , ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾಗಬೇಕು. ಆ ನಿಟ್ಟಿನಲ್ಲಿ ಸಂಘ ಕೆಲಸಮಾಡುತ್ತದೆ ಎಂದು ಹೇಳಿದರು.
ಮೈಮುಲ್ ಅಧ್ಯಕ್ಷ ಪಿ. ಎಂ.ಪ್ರಸನ್ನ ಮಾತನಾಡಿದರು. ತಾಲೂಕಿನ ಒಕ್ಕಲಿಗರ ಸಂಘದ ಅಧ್ಯಕ್ಷ ಆನಂದ್ ಬಸಲಾಪುರ, ಉಪಾಧ್ಯಕ್ಷ ಚಂದ್ರೆಗೌಡ, ಜಗದೀಶ್, ಕಾನೂನು ಸಲಹೆಗಾರ ಕೆ.ಡಿ.ಸಂದೀಪ್, ಕಾರ್ಯದರ್ಶಿ ಮೋಹನ್, ಖಜಾಂಚಿ ಮನು, ನಿರ್ದೇಶಕ ಗಣೇಶ್, ರಾಜೇಶ್, ಅನಿಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಇತರರು ಇದ್ದರು.