ಪ್ರತಿನಿಧಿ ವರದಿ ಚಾಮರಾಜನಗರ
ತಾಲೂಕಿನ ಉಗನೇದಹುಂಡಿ ಬಳಿ ಬೈಕ್ ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೈಸೂರಿನ ನಿವಾಸಿ ಬಾಲು ಮೃತವ್ಯಕ್ತಿ. ಈತನ ಸ್ನೇಹಿತ ಮಹದೇವಸ್ವಾಮಿ ಎಂಬುವರಿಗೆ ತಲೆಗೆ ಗಂಭಿರವಾಗಿ ಪೆಟ್ಟಾಗಿ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮೈಸೂರಿನಿಂದ ಉಗನೇದಹುಂಡಿಯಲ್ಲಿರುವ ತನ್ನ ಸ್ನೇಹಿತನ ಮನೆಗೆ ಬರುತ್ತಿದ್ದ ವೇಳೆ ಉಗನೇದಹುಂಡಿ ಬಳಿ ಎದುರುಗಡೆಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಬಾಲು ಮೃತಪಟ್ಟಿದ್ದು, ಮಹದೇವಸ್ವಾಮಿ ತಲೆಗೆ ಪೆಟ್ಟಾಗಿದೆ. ಗಾಯಗೊಂಡ ಮಹದೇವಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2ಸಿಎಚ್ಎನ್.5: