ಪ್ರತಿನಿಧಿ ವರದಿ ಬೇಗೂರು
ಹೋಬಳಿ ವ್ಯಾಪ್ತಿಯ ವಿಶ್ವಗುರು ಬಸವೇಶ್ವರ ಸೇವಾ ಸಮಿತಿ ವತಿಯಿಂದ ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಸೋಮಹಳ್ಳಿಯ ಶ್ರೀ ವೀರ ಸಿಂಹಾಸನ ಶಿಲಾಮಠದ ಶ್ರೀ ಸಿದ್ದಮಲ್ಲಪ್ಪ ಸ್ವಾಮಿ ಅವರು ಬಸವೇಶ್ವರರ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಿದರು. ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹಾಗೂ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್ ಮೆರವಣಿಗೆಗೆ ಚಾಲನೆ ನೀಡಿದರು.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್.ಎಸ್.ನಂಜಪ್ಪ, ನೀಲಕಂಠಪ್ಪ, ನಟರಾಜು, ನಾಗರಾಜು, ಮಹಾದೇವಸ್ವಾಮಿ ಸೇರಿದಂತೆ ಇತರರು ಇದ್ದರು.