ಅರಣ್ಯ ಇಲಾಖೆ ಎಸಿಎಫ್ ಚಂದ್ರಶೇಖರ್ ಪಾಟೀಲ್ ಮಾಹಿತಿ
ಪ್ರತಿನಿಧಿ ವರದಿ ಹನೂರು
ಸಸ್ಯಗಳನ್ನು ಹೆಚ್ಚು ಬೆಳೆಸಿ ಉಳಿಸುವ ಮೂಲಕ ಜತೆಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಬೇಕು ಎಂದು ಅರಣ್ಯ ಇಲಾಖೆಯ ಎಸಿಎಫ್ ಚಂದ್ರ ಶೇಖರ್ ಪಾಟೀಲ್ ಹೇಳಿದರು.
ತಾಲೂಕಿನ ಬಸಪ್ಪನದೊಡ್ಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಯಾವುದೇ ಕಾರಣಕ್ಕೂ ನಾವು ಪರಿಸರವನ್ನು ನಾಶ ಮಾಡುವ ಸಾಹಸಕ್ಕೆ ಕೈ ಹಾಕಬಾರದು ಜತೆಗೆ ಮುಖ್ಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಬೇಕು ಎಂದರು.
ಸೂಳೇರಿಪಾಳ್ಯ ಗ್ರಾಪಂ ಅಧ್ಯಕ್ಷ ಮುತ್ತುರಾಜು ಮಾತನಾಡಿ, ನಮ್ಮ ಪಂಚಾಯಿತಿ ಕೇಂದ್ರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ. ಹಾಗಾಗಿ ಸಸಿಗಳನ್ನು ಬೆಳೆಸಿ ಉಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಬಸಪ್ಪನದೊಡ್ಡಿ ಶಾಲೆಯ ಮುಖ್ಯ ಶಿಕ್ಷಕ ವೀರಪ್ಪ, ಹನೂರು ಬಫರ್ ವಲಯದ ಅರಣ್ಯ ಅಧಿಕಾರಿ ಪ್ರವೀಣ್, ಶಾಲೆಯ ಶಿಕ್ಷಕರು, ಹೋಲಿಕಾಸ್ ಸಂಸ್ಥೆಯ ಸಿಬ್ಬಂದಿ, ಮಕ್ಕಳು ಉಪಸ್ಥಿತರಿದ್ದರು.