ಪ್ರತಿನಿಧಿ ವರದಿ ಚಾಮರಾಜನಗರ
ಜು.20ರಂದು ನಗರದಲ್ಲಿ ನಡೆಯುವ ಶ್ರೀಚಾಮರಾಜೇಶ್ವರಸ್ವಾಮಿ ಬ್ರಹ್ಮ ರಥೋತ್ಸವದ ಹಿನ್ನೆಯಲ್ಲಿ ನಗರದಲ್ಲಿ ಸಂಜೀವಿನಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ಸ್ಥಳದಲ್ಲೆ ಶ್ರೀ ಚಾಮರಾಜೇಶ್ವರಸ್ವಾಮಿಯ ಬ್ರಹ್ಮರಥದ ಚಿತ್ರಕ್ಕೆ ಬಣ್ಣ ಹಚ್ಚುವ ಹಾಗೂ ಚಿತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳು ಬ್ರಹ್ಮರಥದ ಚಿತ್ರ ಬರೆದು ಅದಕ್ಕೆ ಬಣ್ಣ ಹಚ್ಚಿ ಸಂಭ್ರಮಿಸಿದರು.
ನಗರದ ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲೆಗಳ ಸುಮಾರು 480ಕ್ಕೂ ಹೆಚ್ಚು ಮಕ್ಕಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಎಲ್ ಕೆಜಿ, ಯುಕೆಜಿ ಹಾಗೂ ಒಂದರಿಂದ 4ನೇ ತರಗತಿಯ ಮಕ್ಕಳಿಗಾಗಿ ಸಿದ್ದಗೊಳಿಸಲಾದ ಶ್ರೀ ಚಾಮರಾಜೇಶ್ವರಸ್ವಾಮಿಯ ಬ್ರಹ್ಮ ರಥದ ಚಿತ್ರಕ್ಕೆ ಬಣ್ಣ ಹಚ್ಚುವ ಹಾಗೂ 5 ರಿಂದ 10ನೇ ತರಗತಿಯ ಮಕ್ಕಳಿಗಾಗಿ ಚಿತ್ರ ಬರೆದು ಅದಕ್ಕೆ ಬಣ್ಣ ಹಚ್ಚುವ ವಿಭಾಗಗಳನ್ನಾಗಿ ವಿಂಗಡಿಸಲಾಗಿತ್ತು. ಎರಡು ವಿಭಾಗಗಳಲ್ಲು ಮಕ್ಕಳು ಸಂಭ್ರಮದಿಂದ ಶ್ರೀ ರಾಮನ ಚಿತ್ರ ಬರೆದು, ಚಿತ್ರಕ್ಕೆ ಬಣ್ಣ ಹಚ್ಚಿ ಸಂಭ್ರಮಿಸಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದ ಮೂರು ಜನ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಒಂದು ಬಹುಮಾನ ನೀಡಲಾಗುತ್ತದೆ. ಅಲ್ಲದೆ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಎಂದು ಸಂಜೀವಿನಿ ಟ್ರಸ್ಟ್ ನ ಗೌರಿ ರಾಮಕೃಷ್ಣ ಮಾಹಿತಿ ನೀಡಿದರು.
ಸಂಜೀವಿನಿ ಟ್ರಸ್ಟ್ ನ. ಕಾರ್ಯದರ್ಶಿ ಸತೀಶ್ ಕುಮಾರ್, ಅಕ್ಷತಾ, ವಾಣಿ, ಸುರೇಶ್ ಗೌಡ ಸೇರಿದಂತೆ ವಿವಿಧ ಶಾಲೆಯ ಮಕ್ಕಳು ಇದ್ದರು.
7ಸಿಎಚ್ಎನ್.5: ಶ್ರೀ ಚಾಮರಾಜೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಹಿನ್ನೆಯಲ್ಲಿ ಚಾಮರಾನಗರದಲ್ಲಿ ನಡೆದ ಸ್ಥಳದಲ್ಲೆ ಬ್ರಹ್ಮರಥದ ಚಿತ್ರಕ್ಕೆ ಬಣ್ಣ ಹಚ್ಚುವ ಹಾಗೂ ಚಿತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಬ್ರಹ್ಮರಥದ ಚಿತ್ರ ಬರೆದು ಅದಕ್ಕೆ ಬಣ್ಣ ಹಚ್ಚಿ ಸಂಭ್ರಮಿಸಿದರು.