ಬುಳ್ಳಹಳ್ಳಿಯ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾ ಸಂಸ್ಥಾನ ಪೀಠಾಧ್ಯಕ್ಷ ಬಾಲಯೋಗಿ ಸಾಯಿ ಮಂಜುನಾಥ್ ಮಹಾರಾಜ್ ಅಭಿಪ್ರಾಯ
ಪ್ರತಿನಿಧಿ ವರದಿ ದೇವನಹಳ್ಳಿ
ಪತ್ರಿಕೋದ್ಯಮ ಒಂದು ಮುಳ್ಳಿನ ಮೇಲಿನ ಹಾದಿಯಲ್ಲಿ ನಡೆಯುವ ಪತ್ರಕರ್ತರಿಗೆ ಹಲವು ಸವಾಲುಗಳನ್ನು ಎದುರಿಸಬೇಕಾದ ಅನಿರೀಕ್ಷಿತ ಸಮಸ್ಯೆಗಳು ಹಾಗೂ ಪರ ವಿರೋಧ ಎಲ್ಲವನ್ನು ನ್ಯಾಯ ಸಮ್ಮತವಾಗಿ ಮಾಡಬೇಕು ಎಂದು ಬುಳ್ಳಹಳ್ಳಿಯ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾ ಸಂಸ್ಥಾನ ಪೀಠಾಧ್ಯಕ್ಷ ಬಾಲಯೋಗಿ ಸಾಯಿ ಮಂಜುನಾಥ್ ಮಹಾರಾಜ್ ತಿಳಿಸಿದರು.
ದೇವನಹಳ್ಳಿ ತಾಲೂಕು ವಿಜಯಪುರ ಪಟ್ಟಣದ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೇವನಹಳ್ಳಿ ತಾಲ್ಲೂಕು ಘಟಕದ ಪತ್ರಿಕಾ ದಿನಾಚರಣೆ, ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸುನೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪತ್ರಿಕಾ ವಿತರಕರಿಗೆ ಮತ್ತು ಪತ್ರಕರ್ತರ ಮಕ್ಕಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಮಾಡಲಾಯಿತು, ಚಳಿಗಾಳಿ ಎನ್ನದೇ ಓಡಾಡುವ ಪತ್ರಕರ್ತರಿಗೆ ರೈನ್ ಕೋಟ್ ಮತ್ತು ಬ್ಯಾಗ್ ಗಳನ್ನು ವಿತರಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಮಾತನಾಡಿದರು. ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯತರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೋಕೇಶ್, ರಾಜ್ಯ ಸಮಿತಿ ಸದಸ್ಯ ಸಿ.ಪಿ.ಕುಸುಮ ಪರ್ವತರಾಜ್, ಅಕ್ಷತಾ ಚಾರಿಟಬಲ್ ಟ್ರಸ್ಟ್ ಅಧ್ಯಕ ದೇವರಾಜ್, ಪುರಸಭಾ ಮಾಜಿ ಅಧ್ಯಕ್ಷ ಸತೀಶ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ರಾಜಣ್ಣ, ಸಂಘದ ತಾಲೂಕು ಉಪಾಧ್ಯಕ್ಷರಾದ ಪಿ.ಹರ್ಷ, ನರಸಿಂಹಮೂರ್ತಿ, ಪ್ರಧಾನಕಾರ್ಯದರ್ಶಿ ಮುನಿನಾರಾಯಣಪ್ಪ, ಮಧುಚಂದ್ರ, ಖಜಾಂಚಿ ಹೈದರ್ ಸಾಬ್ ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು ಮತ್ತು ಸದಸ್ಯರು ಇನ್ನು ಹಲವು ಮುಖಂಡರು ಇದ್ದರು.
10ಡಿಎಚ್ಎಲ್ ಪಿ -೩: ದೇವನಹಳ್ಳಿ ತಾಲೂಕು ವಿಜಯಪುರ ಪಟ್ಟಣದ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸುನೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.