ಅಧ್ಯಕ್ಷ ನಾಗಾನಂದ ಕೆಂಪರಾಜ್ ಅಭಿಪ್ರಾಯ
ಪ್ರತಿನಿಧಿ ವರದಿ ಕೋಲಾರ
ಸಮಾಜಸೇವೆ ದೇವರ ಸೇವೆ ಎನ್ನುವ ಮನೋಭಾವನೆ ಒಳ್ಳೆಯ ಮನಸ್ಸುಇರುವವರಿಗೆ ಬಳಿ ಮಾತ್ರ ಇರುತ್ತದೆ ಎಂದು ರೋಟರಿ ಕ್ಲಬ್ ನೂತನ ಅಧ್ಯಕ್ಷ ನಾಗನಂದ ಕೆಂಪರಾಜ್ ಹೇಳಿದರು.
ನಗರದ ರೋಟರಿ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.ಸಂಸ್ಧೆಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಸಾಧಕರನ್ನು ಸನ್ಮಾನಿಸಲಾಯಿತು. ರೋಟರಿ ಮಾಜಿ ಅಧ್ಯಕ್ಷ ರವೀಂದ್ರನಾಥ್, ಜಿಲ್ಲಾ ಕಾರ್ಯದರ್ಶಿ ಎಸ್.ವಿ.ಸುಧಾಕರ್, ಮುಖಂಡರಾದ ಲಕ್ಷ್ಮೀನಾರಾಯಣ್, ರೋಟರಿ ಸಿಎಂಆರ್ ಶ್ರೀನಾಥ್, ಸುಧಾಕರ್ ಇದ್ದರು.