ಗ್ರಾಪಂ ಸದಸ್ಯ ಸೋಮಶೇಖರ್ ಅಹೋರಾತ್ರಿ ಧರಣಿ
ಪ್ರತಿನಿಧಿ ವರದಿ ದೇವನಹಳ್ಳಿ
ತಾಲೂಕಿನ ಕನ್ನಮಂಗಲ ಗ್ರಾಪಂ ಪಿಡಿಒ ಟಿ.ಶ್ರೀನಿವಾಸ್ ಅಮಾನತಿಗೆ ಆಗ್ರಹಿಸಿ ಕನ್ನಮಂಗಲ ಗ್ರಾಪಂ ಸದಸ್ಯ ಸೋಮಶೇಖರ್ ಜು.15 ಸೋಮವಾರದಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳ ಬೆಂಬಲದೊಂದಿಗೆ ಅಹೋರಾತ್ರಿ ಧರಣಿ ನಡೆಸಲಿದ್ದಾರೆ.
ಕನ್ನಮಂಗಲ ಗ್ರಾಪಂ ವ್ಯಾಪ್ತಿಯ ಪೂಜನಹಳ್ಳಿ ಗ್ರಾಮದ ಸರ್ಕಾರಿ ಅಂಗನವಾಡಿ ಜಾಗವನ್ನ ಮತ್ತು ಸರ್ಕಾರಿ ರಸ್ತೆಯನ್ನು ನಕಲಿ ಹಕ್ಕು ಪತ್ರದ ಆಧಾರದ ಮೇಲೆ ಖಾಸಗಿ ವ್ಯಕ್ತಿಗಳಿಗೆ ಇ-ಸ್ವತ್ತು ಮಾಡಿಕೊಡಲಾಗಿದೆ ಎಂದು ಆರೋಪಿಸಿ, ಅಕ್ರಮ ನಡೆಸಲು ಕಾರಣವಾದ ಪಿಡಿಒ ಶ್ರೀನಿವಾಸ್.ಟಿ ಸೇರಿದಂತೆ ಇತರೆ ಅಧಿಕಾರಿಗಳನ್ನು ಅಮಾನತ್ತು ಮಾಡಿ ವಿಶೇಷ ತಂಡ ರಚನೆ ಮಾಡಿ ತನಿಖೆ ನಡೆಸಬೇಕೆಂದು ಅಹೋ ರಾತ್ರಿ ಧರಣಿ ಮಾಡಲಾಗುತ್ತದೆ ಎಂದು ಕನ್ನಮಂಗಲ ಗ್ರಾಪಂ ಸದಸ್ಯ ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
13ಡಿಎಚ್ಎಲ್ ಪಿ -೧: ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್