ಮಾಜಿ ಸಚಿವ ಡಾ.ನಾರಾಯಣಗೌಡ ಮಾಹಿತಿ
ಪ್ರತಿನಿಧಿ ವರದಿ ಕೃಷ್ಣರಾಜಪೇಟೆ
ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೆ.ಆರ್.ಪೇಟೆಯಲ್ಲಿ ಅಭಿನಂದನೆ ಸಮಾರಂಭ ಹಮ್ಮಿಕೊಂಡಿರುವ ಬಗ್ಗೆ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಡಾ.ನಾರಾಯಣಗೌಡ ತಿಳಿಸಿದರು.
ಜು.೨೧ರಂದು ಪಟ್ಟಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಸಚಿವ ಡಾ.ನಾರಾಯಣಗೌಡ ಹಾಗೂ ಶಾಸಕ ಎಚ್.ಟಿ.ಮಂಜು ಅವರ ನೇತೃತ್ವದಲ್ಲಿ ತಾಲೂಕಿನ ಸಂತೆಬಾಚಹಳ್ಳಿ, ಶೀಳನೆರೆ, ಬೂಕನಕೆರೆ, ಅಕ್ಕಿಹೆಬ್ಬಾಳು, ಕಿಕ್ಕೇರಿ ಹಾಗೂ ಹೊಸಹೊಳಲು ಗ್ರಾಮಗಳಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು.
ಮಾಜಿ ಸಚಿವ ಡಾ.ನಾರಾಯಣ ಗೌಡ ಮಾತನಾಡಿ, ಮಂಡ್ಯ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ಎರಡೂವರೇ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಜಯಮಾಲೆ ತನ್ನದಾಗಿಸಿಕೊಂಡಿದ್ದರೆ. ಮತದಾರರ ಪರವಾಗಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಸನ್ಮಾನಿಸಿ ಅಭಿನಂದಿಸಿ ಗೌರವಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿಕೊಡಬೇಕು ಎಂದು ಹೇಳಿದರು.
ಶಾಸಕ ಮಂಜು ಮಾತನಾಡಿ, ಕುಮಾರಸ್ವಾಮಿ ಅವರು ಕೇಂದ್ರದ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಕೆ.ಆರ್.ಪೇಟೆಗೆ ಆಗಮಿಸುತ್ತಿರುವುದು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಂದಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಆದ್ದರಿಂದ ಕಾರ್ಯಕರ್ತರು ಜು.೨೧ರ ಭಾನುವಾರ ಪಟ್ಟಣದಲ್ಲಿ ನಡೆಯುತ್ತಿರುವ ಐತಿಹಾಸಿಕ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಇತಿಹಾಸ ನಿರ್ಮಿಸಬೇಕು ಎಂದು ಕರೆ ನೀಡಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಜಾನಕಿ ರಾಮ್, ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಮೂಡ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಮುಖಂಡರಾದ ಪೂನಾಶಂಕರ್, ಮಂಜೇಗೌಡ, ಶೀಳನೆರೆ ಸಿದ್ದೇಶ್, ಪ್ರಕಾಶ್, ನಾಗೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ: ೧೭ ಕೆ.ಆರ್.ಪಿ ೦೨: ಕೃಷ್ಣರಾಜಪೇಟೆ ತಾಲೂಕಿನ ಶೀಳನೆರೆ ಗ್ರಾಮದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಡಾ.ನಾರಾಯಣಗೌಡ ಮಾತನಾಡಿದರು.