ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅಭಿಪ್ರಾಯ
ಅಕ್ಷರಭ್ಯಾಸ ಕಾರ್ಯಕ್ರಮ
ಪ್ರತಿನಿಧಿ ವರದಿ ಮದ್ದೂರು
ತಂದೆ, ತಾಯಿಗಳು ಮಕ್ಕಳನ್ನು ಸುಸಂಸ್ಕೃತರನ್ನಾಗಿ, ಸರಿಯಾದ ದಾರಿಯಲ್ಲಿ ನಡೆಸುವ ಜವಾಬ್ದಾರಿ ಹೊಂದಿರಬೇಕು ಎಂದು ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಎಂ.ಎಚ್.ಚೆನ್ನೇಗೌಡ ವಿದ್ಯಾನಿಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಕ್ಷರಭ್ಯಾಸ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಸನಾತನ ಧರ್ಮದ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿರುವ ಎಂ.ಎಚ್.ಚನ್ನೇಗೌಡ ವಿದ್ಯಾಲಯ ಮಕ್ಕಳಿಗೆ ಅಕ್ಷರಭ್ಯಾಸವನ್ನು ಶಾಸ್ತ್ರೋಕ್ತವಾಗಿ ಕಲಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಮುನ್ನುಡಿ ಹಾಕುತ್ತಿರುವುದು ಪ್ರಶಂಸನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಂ.ಎಚ್.ಚನ್ನೇಗೌಡ ಮಾತನಾಡಿದರು. ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ, ಪುರಸಭೆ ಸದಸ್ಯೆ ಪ್ರಮೀಳ, ಎಚ್.ಕೆ.ವೀರಣ್ಣಗೌಡ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ನಂದಿನಿ, ಮುಖ್ಯ ಶಿಕ್ಷಕರಾದ ವರದರಾಜು, ಚನ್ನಪ್ಪ, ಆಡಳಿತ ಅಧಿಕಾರಿಗಳಾದ ಯು.ಎಸ್.ರವಿ, ಹರೀಶ್ ಇದ್ದರು.