ಮೈಸೂರು: ಅರಣ್ಯ ಇಲಾಖೆ ವತಿಯಿಂದ ಮೈಸೂರಿನ ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ಭಾನುವಾರ ವನ ಮಹೋತ್ಸವ ಆಯೋಜಿಸಲಾಗಿತ್ತು.
ಶಾಸಕ ಟಿ.ಎಸ್.ಶ್ರೀವತ್ಸ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಸುಮಾರು 500 ವಿವಿಧ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮಿಕಾಂತ್, ಆರ್ಎಫ್ಓಗಳಾದ ಕೆ.ಸುರೇಂದ್ರ, ಶ್ರೀಮತಿ ಧನ್ಯಶ್ರೀ, ಡಿಆರ್ಎಫ್ಓಗಳಾದ ಸಿ.ಎಸ್.ಪ್ರಕಾಶ್ ಮತ್ತು ಎಂ.ವಿ.ವೆಂಕಟಾಚಲ, ಬಿಜೆಪಿ ಮುಖಂಡರಾದ ಎನ್.ಪ್ರದೀಪ್ ಕುಮಾರ್, ಕಿಶೋರ್, ಶಾಸಕರ ಆಪ್ತ ಸಹಾಯಕ ಆದಿತ್ಯ ಮತ್ತಿತರರು ಉಪಸ್ಥಿತರಿದ್ದರು.