ಪಾಲಿಟಿಕ್ಸ್ ನಲ್ಲಿ ಏನೂ ಮಾಡ್ತಿವಿ ಅನ್ನೋದನ್ನು ಹೇಳಬಾರದು. ಹೇಳಿದ್ರೆ ಕೆಲವರು ಅದಕ್ಕೂ ಬೇರೆ ಸ್ಕೀಂ ಹಾಕಿ ಬಿಡುತ್ತಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿಂದು ತಿರುಗೇಟು ನೀಡಿದ್ದಾರೆ.
ಮುಡಾ ಹಗರಣದ ವಿಚಾರವಾಗಿ ಪ್ರತಾಪ್ ಸಿಂಹ ವಿರುದ್ಧ ಮುಡಾ ಅಧ್ಯಕ್ಷ ಕೆ ಮರಿಗೌಡ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು. ಮಾಜಿ ಸಂಸದ ಪ್ರತಾಪ್ ಸಿಂಹ 25% ಮೊತ್ತದ ದಂಡವನ್ನು ತಪ್ಪಿಸಲು ವಾಮ ಮಾರ್ಗ ಅನುಸರಿಸಿದ್ದಾರೆಂದು ಪ್ರಕಟಣೆಯಲ್ಲಿ ಗಂಭೀರ ಆರೋಪವನ್ನು ಮಾಡಿದ್ದರು. ಈ ವಿಚಾರವಾಗಿ ಕೆ.ಮರಿಗೌಡ ವಿರುದ್ಧ ಮೈಸೂರಿನಲ್ಲಿಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಪಾಲಿಟಿಕ್ಸ್ ನಲ್ಲಿ ಏನೂ ಮಾಡ್ತಿವಿ ಅನ್ನೋದನ್ನು ಹೇಳಬಾರದು. ಹೇಳಿದ್ರೆ ಕೆಲವರು ಅದಕ್ಕೂ ಬೇರೆ ಸ್ಕೀಂ ಹಾಕಿ ಬಿಡುತ್ತಾರೆತಾಯಿ ಚಾಮುಂಡಿಯೇ ನನಗೆ ಮುಂದಿನ ದಾರಿ ತೋರಿಸುತ್ತಾಳೆ.ನಾನು ಜನರಿಂದ ತಿರಸ್ಕೃತನಾದ ವ್ಯಕ್ತಿ ಅಲ್ಲ. ಏನೋ ಕೆಲವರಿಂದ ಟಿಕೆಟ್ ತಪ್ಪಿರಬಹುದು, ಹಾಗಂತ ಇದೇ ಅಂತಿಮ ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ.
ಕನಿಷ್ಟ ಜ್ಞಾನವಿಲ್ಲದ ಮರೀಗೌಡ ಒಬ್ಬ ಬಕ್ರಾ. ಇಂತಹ ಬಕ್ರಾಗಳಿಂದಲೇ ಸಿಎಂ ಗೆ ಕೆಟ್ಟ ಹೆಸರು ಬರುತ್ತಿದೆ.ಸಿಆರ್ ಕಾನೂನು ರೀತಿ ಇಲ್ಲದ ಕಾರಣ ನಾನೇ ಅದನ್ನು ರದ್ದು ಮಾಡಿಸಿದ್ದೆ.ಈ ಪ್ರಕರಣಕ್ಕೂ ಮೂರು ನಾಲ್ಕು ಸಾವಿರ ಕೋಟಿ ಹಗರಣಕ್ಕೂ ಏನು ಸಂಬಂಧ, ಸಂಬಂಧವೇ ಇಲ್ಲದ ವಿಚಾರವನ್ನು ಇನ್ನೊಂದಕ್ಕೆ ಹೋಲಿಸಬಾರದು ಎಂಬ ಸಣ್ಣ ಪ್ರಮಾಣದ ಕನಿಷ್ಠ ತಿಳುವಳಿಕೆ ಇಲ್ಲದ ತಿಳಿಗೇಡಿ ಮರೀಗೌಡ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ 40 ವರ್ಷದ ಸಿದ್ದರಾಮಯ್ಯ ಅವರ ರಾಜಕಾರಣ ನೋಡಿದರೆ ಅವರನ್ನು ಭ್ರಷ್ಟ ಎನ್ನಲು ಸಾಧ್ಯವಿಲ್ಲ. ಆದರೆ, ಈಗ ಸಿದ್ದರಾಮಯ್ಯನವರ ಬಗ್ಗೆಯೂ ಅನುಮಾನ ಶುರುವಾಗಿದೆ.
40 ವರ್ಷದಲ್ಲಿ ಕಳಂಕ ಅಂಟಿಸಿ ಕೊಳ್ಳದಿರುವ ನೀವು ಇದ್ಯಾವುದೋ 16 ಸೈಟಿಗೋಸ್ಕರ ಕಳಂಕ ಅಂಟಿಸಿಕೊಳ್ಳುತ್ತಿದ್ದೀರಿ. ಇದು ಬೇಕಾ ನಿಮಗೆ ಎಂದು ಪ್ರಶ್ನಿಸಿದ್ದಾರೆ.
ಮುಂದಿನ ಮೂರುವರೆ ವರ್ಷ ನೀವೇ ಸಿಎಂ ಆಗಿ ಇರ್ತೀರಿ. ಇಡೀ ಮೂರುವರೆ ವರ್ಷ ಇದೇ ಆರೋಪಕ್ಕೆ ತುತ್ತಾಗುತ್ತೀರಿ. ನೊಣ ತಿಂದು ಜಾತಿ ಕೆಡಿಸಿಕೊಳ್ಳಬೇಡಿ.
ಮೂಡಾ ಹಗರಣವನ್ನು ಸಂತೋಷ್ ಹೆಗ್ಡೆ, ಕುಮಾರ್ ರಂತಹ ವ್ಯಕ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಿ ಎಂದರು.ಸಿದ್ದರಾಮಯ್ಯ ಮೂರುವರೆ ವರ್ಷ ಸಿಎಂ ಆಗಿರುತ್ತಾರೆ ಎಂದು ಅವರ ಹಿಂಬಾಲಕರು ಹೇಳುತ್ತಿರುತ್ತಾರೆ.ಹೀಗಾಗಿ ನಾನು ಹೇಳಿದೆ ಅಷ್ಟೇ. ಡಿ.ಕೆ ಶಿವಕುಮಾರ್ ಸಿಎಂ ಆದ್ರು ಖುಷಿನೇ,ಅವರು ಸಹ ಹಳೇ ಮೈಸೂರು ಭಾಗದವರೇ ಹಾಗೂಸಿದ್ದರಾಮಯ್ಯ ಸಹ ಮೈಸೂರಿನವರೇ. ಅವರು ಬೇರೆ ಪಕ್ಷದವರು ಇರಬಹುದು ಆದರೇ ಅವರು ಮೈಸೂರಿನವರು ಎಂಬ ಹೆಮ್ಮೆ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.