ಪ್ರತಿನಿಧಿ ವರದಿ ಮೈಸೂರು
ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ನಡೆದ ಚರ್ಚಾ ಸ್ಪರ್ಧೆಯಲ್ಲಿ ಬಿ.ಎ.ಯೋಗೇಶ್ ಪ್ರಥಮ ಸ್ಥಾನ ಪಡೆದಿದ್ದಾನೆ.
ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಾಧ್ಯಮ ಹಬ್ಬ (ಜರ್ನೋತ್ರಿ-24)ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯೋಗೇಶ್ ಮೂಲತಃ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಬರಗೂರು ಗ್ರಾಮದವರಾಗಿದ್ದು, ಪ್ರಸ್ತುತ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತೃತೀಯ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದಾನೆ.
ಪತ್ರಕರ್ತ ರಮಾಕಾಂತ್ ಆರ್ಯಾನ್, ಮುತ್ತುರಾಜ್, ವಿಭಾಗದ ಮುಖ್ಯಸ್ಥೆ ಪ್ರೊ.ಎಂ.ಎಸ್.ಸಪ್ನಾ ಇದ್ದರು.