ಪ್ರತಿನಿಧಿ ವರದಿ ಮೈಸೂರು
25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವಮೆಂಟ್ ತಂಡದಿಂದ ಪಾದಯಾತ್ರೆ ಹಾಗೂ ಹುತಾತ್ಮ ಯೋಧರುಗಳ ಭಾವಚಿತ್ರಕ್ಕೆ ಪುಷ್ಪನಮನ ಕಾರ್ಯಕ್ರಮ ನಡೆಸಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಂ ಭತ್ರ, ಲೆಫ್ಟಿನೆಟ್ ಮನೋಜ್ ಕುಮಾರ್ ಪಾಂಡೆ ಮತ್ತು ಕ್ಯಾಪ್ಟನ್ ಸೌರಭ್ ಕಾಲಿಯ ಅವರುಗಳ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಹಾಗೂ ಇನ್ನಿತರರು ಪುಷ್ಪನಮನ ಸಲ್ಲಿಸಿದರು.
ನಂತರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟು ಪಾದಯಾತ್ರೆಯು ದೊಡ್ಡ ಗಡಿಯಾರ, ಗಾಂಧಿ ವೃತ್ತ, ದೇವರಾಜ ಅರಸ್ ರಸ್ತೆ ಮಾರ್ಗವಾಗಿ ಸಂಚರಿಸಿ ಮೆಟ್ರೋಪಾಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಪ್ರತಿಮೆ ಎದುರು ಮುಕ್ತಾಯಗೊಂಡಿತು. ಈ ವೇಳೆ ನಿವೃತ್ತ ಸೈನ್ಯಧಿಕಾರಿ ಕಾರ್ನಲ್ ಮಹೇಂದ್ರ ಸಿಂಗ್ ಅವರಿಂದ ರಿತ್ ಪೆರೇಡ್ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವಮೆಂಟ್ ಸಂಸ್ಥಾಪಕ ವಿ.ಮಹೇಶ್, ಪಾಲಿಕೆ ಉಪ ಆಯುಕ್ತ ಮಂಜುನಾಥ್ ರೆಡ್ಡಿ, ಮಣಿಪಾಲ ಆಸ್ಪತ್ರೆಯ ಡಾ. ಸುಮಿತ್, ಎಂಇಎಂ ಉಪಾಧ್ಯಕ್ಷರು ವಿವೇಕಾನಂದ, ಪ್ರಧಾನ ಕಾರ್ಯದರ್ಶಿ ಶ್ರೀಧರ್, ನಿರ್ದೇಶಕರಾದ ಕಿಶೋರ್ ಕದಂ, ವಿಶ್ವನಾಥ್, ಲೋಕೇಶ್, ಧನಂಜಯ, ಸುರೇಶ್ ಸೇರಿದಂತೆ 70ಕ್ಕೂ ಹೆಚ್ಚು ಮಾಜಿ ಸೈನಿಕರು, ಎನ್ಸಿಸಿ ಹಾಗೂ ಸೈನಿಕ್ ಅಕಾಡೆಮಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
====================