ಪ್ರತಿನಿಧಿ ವರದಿ ಮೈಸೂರು
ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ನೌಕರರಿಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಹಲವರ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ವಿವಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದಿನಗೂಲಿ ನೌಕರರ ಸಂಘದ ಕಾರ್ಯದರ್ಶಿ ಡಾ.ಎಂ.ಕೆ. ಬಿಳಿಗಿರಿ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಕ್ತ ವಿವಿಗೆ ೨೦೧೧-೧೨ನೇ ಸಾಲಿನಿಂದ ಇಲ್ಲಿವರೆಗೆ ಬಂದಿರುವ ಕುಲಪತಿಗಳು, ಕುಲಸಚಿವರು, ವ್ಯವಸ್ಥಾಪನಾ ಮಂಡಳಿ ಸದಸ್ಯರಾರೂ ತಮಗೆ ನ್ಯಾಯ ದೊರಕಿಸಿಲ್ಲ. ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಲಾಗಿದ್ದು, ನೇಮಕಾತಿ ವೇಳೆ ಭ್ರಷ್ಟಾಚಾರ ನಡೆದಿದೆ. ಕೋರ್ಟ್ನ ಆದೇಶದಡಿಲ್ಲಿ ಬರುವ ೨೪ ಮಂದಿಯಲ್ಲಿ ೧೫ ಮಂದಿ ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ದಲಿತರಿಗೆ ಅನ್ಯಾಯ ಮಾಡಬೇಕೆಂಬ ಉದ್ದೇಶದಿಂದ ನೇಮಕಾತಿ ಕಡೆಗಣಿಸಲಾಗಿದೆ ಎಂದು ದೂರಿದರು. ಸಿಎಂ ತವರು ಜಿಲ್ಲೆಯಲ್ಲಿಯೇ ಮುಕ್ತ ವಿವಿಯಲ್ಲಿ ನೇಮಕಾತಿ ವೇಳೆ ಅನ್ಯಾಯ ನಡೆಯುತ್ತಿದ್ದು, ಸಿಎಂ ಸಹಾ ಮೌನ ಮುರಿದು ಈ ಬಗ್ಗೆ ಗಮನ ಹರಿಸಬೇಕಿದೆ. ಇಲ್ಲವಾದರೆ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಹೇಶ್, ಸ್ವಾಮಿ, ಶಿವಕುಮಾರ್ ಇದ್ದರು.
================
ದಮನಿತರ ಬಂಗಾರದ ದಿನ ಇಂದು
ಮೈಸೂರು: ಚಾರ್ವಾಕ ವೈಚಾರಿಕ ಮಹಾ ಮನೆ ಸಂಸ್ಥೆ ವತಿಯಿಂದ ಜು.೨೮ರಂದು ಬೆಳಗ್ಗೆ 10.30ಕ್ಕೆ ಮಂಡ್ಯದ ತಾಲೂಕಿನ ಕಾಗೆ ಮಂಟಿಯ ಬೋರೇಗುಡ್ಡದ ಚಾರ್ವಾಕ ವೈಚಾರಿಕ ಮಹಾ ಮನೆಯಲ್ಲಿ ದಮನಿತರ ಬಂಗಾರದ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಂಗಕರ್ಮಿ ಗಿರೀಶ್ ಮಾಚಳ್ಳಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದ್ದು, ಇದಕ್ಕೂ ಮುನ್ನ ನಮ್ಮ ತಂಡದಿಂದ ಮನುಸ್ಮೃತಿ v/s ಭಾರತ ಸಂವಿಧಾನ ನಾಟಕ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ಸುನೀಲ್ ಬೋಸ್, ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಎಂ.ಶಿವಪ್ರಸಾದ್, ಪದ್ಮನಾಭ, ಸಂತೋಷ್, ಸಿದ್ಧಾರ್ಥ್, ದಿವ್ಯ ಚೇತನ, ನಿರ್ಮಲಾ ದೇವಿ ಇದ್ದರು.
=================
ಮಹಿಳಾ ಕಾಂಗ್ರೆಸ್ ಪ್ರತಿಭಟನೆಗೆ ಖಂಡನೆ
ಮೈಸೂರು: ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಿದ್ದು ಖಂಡನೀಯ ಎಂದು ನಗರದ ಪಾಲಿಕೆ ಮಾಜಿ ಸದಸ್ಯೆ ಪ್ರೇಮಾ ಶಂಕರೇಗೌಡ ಟೀಕಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರ್ನಾಥ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿದ್ದು ಸರಿಯಲ್ಲ. ಅಲ್ಲದೇ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದು ಖಂಡನೀಯ. ಕೇಂದ್ರ ಸರ್ಕಾರ ರಾಜ್ಯದ ರೈಲ್ವೆ ವಲಯಕ್ಕೆ ೭೫೦೦ ಕೋಟಿ ನೀಡಿದೆ. ಬೆಂಗಳೂರು-ಹೈದರಾಬಾದ್ ೧೨ ಪಥದ ರಸ್ತೆ ನಿರ್ಮಾಣ ಅಂತಿಮ ಹಂತಕ್ಕೆ ಬಂದಿದೆ. ಆದರೆ, ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಹಣ ನೀಡಲಾಗದೇ ಪಾಪರ್ ಆಗಿದೆ ಎಂದು ಲೇವಡಿ ಮಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದೇ ಹತಾಶರಾಗಿರುವ ಪುಷ್ಪಾ ಅಮರ್ನಾಥ್ ಅವರು ವೃಥಾ ಕೇಂದ್ರದ ವಿರುದ್ಧ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದರು. ಗೋಷ್ಠಿಯಲ್ಲಿ ಎಂ.ಡಿ. ದಾಕ್ಷಾಯಿಣಿ, ಭಾಗ್ಯ ಮಹದೇಶ್ ಮತ್ತಿತರರು ಇದ್ದರು.
================
ಕೆಎಸ್ಒಯು
ಗಿರೀಶ್ ಮಾಚಳ್ಳಿ
ಪ್ರೇಮಾ ಶಂಕರೇಗೌಡ