ಪ್ರತಿನಿಧಿ ವರದಿ ಚಿಕ್ಕಮಗಳೂರು
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು ವೇಗವಾಗಿ ಗಾಳಿ ಬೀಸುತ್ತಿದೆ. ಗಾಳಿಯಿಂದ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.
ಕೈಮರ ಲಿಂಗದಹಳ್ಳಿ ರಸ್ಯೆಯಲ್ಲಿ 12ಕ್ಕು ಹೆಚ್ಚು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ಹಲವೆಡೆ ಮನೆಗಳ ಮೇಲೆ ಮರ ಉರುಳಿ ಬಿದ್ದು ಹಾನಿಯಾಗಿವೆ. ಇನ್ನು ಮಳೆಯಿಂದ ಹಾನಿಯುಂಟಾದ ಮಲೇನಹಳ್ಳಿ, ಗಾಳಿಪೂಜೆ ಪ್ರದೇಶಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರು. ನಂತರ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿ ಉಂಟಾಗಿದೆ. ಹಾನಿ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅತಿವೃಷ್ಠಿ ಪ್ರದೇಶ ಎಂದು ಘೊಷಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.