ಎರಡು ವರ್ಷಗಳ ನಂತರ ಭರ್ತಿಯಾಗಿರುವ ಕನ್ನಂಬಾಡಿಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನವನ್ನ ಅರ್ಪಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯವು ತುಂಬಿ ಹರಿಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶುಭ ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದ್ದಾರೆ.
ಇಂದು ಕೆಆರ್ ಎಸ್ ಜಲಾಶಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪ್ರದಾಯದಂತೆ ಕನ್ನಡಿಗರ ಜೀವನಾಡಿ ಕಾವೇರಿಗೆ ಪೂಜೆಯನ್ನು ಸಲ್ಲಿಸಿ ನಂತರ ಬಾಗಿವನ್ನು ಅರ್ಪಿಸಿದ್ದಾರೆ. ಇದೇ ವೇಳೆ ಜಲಾಶಯಕ್ಕೆ ಕ್ಷೀರಾಭಿಷೇಕ ಮತ್ತು ಪುಷ್ಪಾರ್ಚನೆಯನ್ನುಕೂಡ ನೆರವೇರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಹೆಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು ಮತ್ತು ಶಾಸಕರು ಈ ಸುಸಂಧರ್ಭಕ್ಕೆ ಜೊತೆಯಾಗಿದ್ದಾರೆ.
ಈ ಬಾರಿ ಮಳೆ ಆರ್ಭಟ ಇನ್ನೂ ಮುಂದುವರೆದಿದ್ದು ಕೆರೆ ಕಟ್ಟೆಗಳು ಭರ್ತಿಯಾಗಿ, ನದಿಗಳು ತುಂಬಿ ಹರಿದಿವೆ. ಅಲ್ಲದೆ ಕೆ ಆರ್ ಎಸ್ ಸಂಪೂರ್ಣವಾಗಿ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಹೆಚ್ಚಿಸಿದೆ.