ಜಿಲ್ಲೆಯಲ್ಲಿ ಎಡೆ ಬಿಡದೆ ಮಳೆ ಸುರಿದಿದ್ದು, ರಾಜ್ಯಕ್ಕೆ ನೀರುಣಿಸುವ ತಾಯಿ ಕಾವೇರಿಯ ತವರೂರು ಮಾತ್ರ ಅತಿವೃಷ್ಟಿಯಿಂದ ನಲುಗುತ್ತಿದೆ. ರಾಜ್ಯ ಸರ್ಕಾರ ಮಾತ್ರ ತನ್ನ ಪಾಡಿಗೆ ಇದೆ ಎಂದು ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಮ್ಮಣಿಚಂಡ ರಂಜಿ ಪೂಣಚ್ಚ ಆರೋಪಿಸಿದ್ದಾರೆ.
ಕೊಡಗು ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ನೀಡಬೇಕು. ಈ ಹಿಂದೆ ಕೇಂದ್ರ ಸರ್ಕಾರ ಘೋಷಿಸಿದ್ದ ಬರ ಪರಿಹಾರ ಕೂಡ ರೈತರ ಕೈ ಸೇರಿಲ್ಲ. ಕೂಡಲೇ ಬಿಡುಗಡೆಗೊಳಿಸಿ ನೊಂದ ರೈತರಿಗೆ ಸಹಾಯ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Leave a comment