ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಮನೆಮಾಡಿದೆ. ಪ್ರಸಕ್ತ ಸಾಲಿನ ಕಡೆಯ ಹಾಗೂ ನಾಲ್ಕನೇ ಆಷಾಢ ಶುಕ್ರವಾರವಾರವಾದ ಇಂದು ನಾಡದೇವತೆ ದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ. ನಾಡ ಅಧಿದೇವತೆಗೆ ಇವತ್ತು ಮುಂಜಾನೆಯಿಂದಲೇ ಸಾಂಪ್ರದಾಯಿಕವಾಗಿ ವಿವಿಧ ಪೂಜೆಗಳು ನೆರವೇರಿದವು. ಸರತಿ ಸಾಲಿನಲ್ಲಿ ನಿಂತು ಅಪಾರ ಭಕ್ತರು ಅಮ್ಮನ ದರ್ಶನ ಪಡೆದರು.
ಕೊನೆಯ ಶುಕ್ರವಾರದಂದು ಸಿಂಹವಾಹಿನಿ ಅಲಂಕಾರದಲ್ಲಿ ಚಾಮುಂಡೇಶ್ವರಿ ತಾಯಿ ಕಂಗೊಳಿಸಿದ್ದಾಳೆ. ಬಗೆಬಗೆಯ ಹೂಗಳಿಂದ ಇಡೀ ದೇವಸ್ಥಾನಕ್ಕೆ ಅಲಂಕಾರ ಮಾಡಲಾಗಿತ್ತು.ಕೊನೆಯ ಶುಕ್ರವಾರದ ಪ್ರಯುಕ್ತ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು.ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದ್ದು
ಪೊಲೀಸರಿಂದ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇನ್ನು, ಅಮ್ಮನ ದರ್ಶನ ಪಡೆದ ಸಾವಿರಾರು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗಿದೆ. 3ನೇ ಶುಕ್ರವಾರ ಆದಂತಹ ಗೊಂದಲಗಳಿಂದ ಮೈಸೂರು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಕಡೆಯ ಶುಕ್ರವಾರವಾದ ಇಂದು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಯನ್ನ ಕೈಗೊಳ್ಳಲಾಗಿದೆ.