ಪ್ರತಿನಿಧಿ ವರದಿ ವಿರಾಜಪೇಟೆ
ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜ ಪ್ರಸಾದ ನಿಲಯದ ಸಭಾಂಗಣದಲ್ಲಿ ಆಗಸ್ಟ್ 4 ರಂದು 222ನೇ ಹೊಂಬೆಳಕು ಮಾಸಿಕ ತತ್ತ್ವಚಿಂತನಾಗೋಷ್ಠಿ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ.
ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಲೇಖಕಿ ಪದ್ಮಿನಿ ಶ್ರೀನಿವಾಸ ಅವರಿಂದ ಗಮಕ ವಾಚನ ನಡೆಯಲಿದೆ. ಶಕ್ತಿ ಪತ್ರಿಕೆ ಸಲಹಾ ಸಂಪಾದಕ ಅನಂತಶಯನ ಉದ್ಘಾಟಿಸಲಿದ್ದಾರೆ.