ಪ್ರತಿನಿಧಿ ವರದಿ ಮಡಿಕೇರಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕಗಳನ್ನು ಪ್ರಕಟಿಸಲು ಯೋಜನೆ ರೂಪಿಸಲಾಗಿದೆ.
ಲೇಖಕರು ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಅಜ್ಜಿ ಕಥೆ, ಜಾನಪದ, ವಿಚಾರ ಸಾಹಿತ್ಯ, ಲಲಿತ ಪ್ರಬಂಧ, ಸಂಶೋಧನ ಕೃತಿಗಳು ಬರಹಗಳನ್ನು ಅರೆಭಾಷೆಯಲ್ಲಿ ಬರಹದಲ್ಲಿ ಬರೆದು ಹಸ್ತಪ್ರತಿಯನ್ನು ಅಕಾಡೆಮಿಗೆ ಸಲ್ಲಿಸಬೇಕಿದೆ.
ತಮ್ಮ ಹಸ್ತಪ್ರತಿಗಳನ್ನು ಸಲ್ಲಿಸಲು 2024 ಆ.31 ಕೊನೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು ಅಥವಾ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ ಮೊ.ನಂ.6362522677 ಸಂಪರ್ಕಿಸಬಹುದು. ಚಿಡಿebಚಿseಚಿಛಿಚಿಜemಥಿ@gmಚಿiಟ.ಛಿom ಗೆ ಕಳುಹಿಸಬೇಕಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮತ್ತು ರಿಜಿಸ್ಟ್ರಾರ್ ಚಿನ್ನಸ್ವಾಮಿ ತಿಳಿಸಿದ್ದಾರೆ.