ಪ್ರತಿನಿಧಿ ವರದಿ ಗೋಣಿಕೊಪ್ಪ
ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
7ನೇ ತರಗತಿ ಮೇಲ್ಪಟ್ಟ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅಂಕ ಪಟ್ಟಿ ಮತ್ತು ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆಯ ದೃಡೀಕರಣ ಪತ್ರ ಅಥವಾ ಶುಲ್ಕ ಪಾವತಿಸಿದ ಪ್ರತಿಯ ನಕಲಿ ಪ್ರತಿಯೊಂದಿಗೆ ಸಂಘದ ನಿಗದಿತ ಅರ್ಜಿ ನಮೂನೆಯೊಂದಿಗೆ ಆಗಸ್ಟ್ ತಿಂಗಳ ಕೊನೆಯ ಒಳಗೆ ಸಲ್ಲಿಸಬೇಕಿದೆ. ಸಂಘದ ಪ್ರತಿನಿಧಿ ಅಥವಾ ಅಧ್ಯಕ್ಷರು, ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘ, ಕುಟ್ಟಂದಿ ಗ್ರಾಮ ಮತ್ತು ಅಂಚೆ, ಅಥವಾ ಅಮ್ಮತ್ತೀರ ವಾಸುವರ್ಮ, ಗೌ.ಕಾರ್ಯದರ್ಶಿ ಇವರಿಗೆ ಸಲ್ಲಿಸಬಹುದು ಎಂದು ಸಂಘದ ಅಧ್ಯಕ್ಷ ನಾಳಿಯಮ್ಮನ ಉಮೇಶ್ ಕೇಚಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 94804 25773 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.