ಟಾಕ್ಸಿಕ್ .. ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾ ಸಾಕಷ್ಟು ವಿಶೇಷ ಕಾರಣಕ್ಕೆ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ. ಯಶ್ ಏನೇ ಮಾಡಿದ್ರು ಸುದ್ದಿ ಅನ್ನೋವಷ್ಟು ದೊಡ್ಡ ಪ್ರಚಾರ ಸಿನಿಮಾಕ್ಕೆ ಸಿಗ್ತಿದೆ. ಕೆಜಿಎಫ್ 2 ನಂತ್ರ ದೊಡ್ಡ ಗ್ಯಾಪ್ ತಗೊಂಡು ಯಶ್ ಟಾಕ್ಸಿಕ್ ಸಿನಿಮಾ ಮಾಡ್ತಿದ್ದಾರೆ. ಈಗಾಗ್ಲೇ ಒಂದು ಶೆಡ್ಯೂಲ್ ಶೂಟಿಂಗ್ ಕಂಪ್ಲೀಟ್ ಮಾಡಿರೋ ಟಾಕ್ಸಿಕ್ ತಂಡ ಎರಡನೇ ಶೆಡ್ಯೂಲ್ ಶೂಟಿಂಗ್ ಗೆ ದೊಡ್ಡ ಮಟ್ಟದಲ್ಲಿ ಪ್ರಿಪರೇಷನ್ ನಡೆಸ್ತಿದೆ. ಈ ಮಧ್ಯೆ ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆದಿದ್ದಾರೆ.
ʼಟಾಕ್ಸಿಕ್’ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಮಧ್ಯೆ
ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ.
ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಸಂಕಷ್ಟ ನಿವಾರಣೆ ಆಗಲಿ ಎಂಬ ಕಾರಣಕ್ಕೆ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ ಈಗ ಉದ್ಭವವಾಗಿದೆ. ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಗೆ ನೋಟಿಸ್ ನೀಡಲಾಗಿದೆ . ಕೆವಿಎನ್ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ.