ಬೇಲೂರು : ಸ್ವಾತಂತ್ರ ದಿನಾಚರಣೆಯನ್ನು ಜೆಎಂಎಫ್ಸಿ ನ್ಯಾಯಾಲಯದ ಆವರಣ ಅದ್ದೂರಿಯಾಗಿ ಆಚರಿಸಿ, ಗ್ರಾಮೀಣ ಭಾಗ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಗುವುದು ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಶಶಿಕಲಾ ಹೇಳಿದರು.
ಪಟ್ಟಣ ಸಮೀಪದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷ ನ್ಯಾಯಾಲಯದಲ್ಲಿ ಸ್ವಾತಂತ್ರ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ವಿಶೇಷವಾಗಿ ನ್ಯಾಯಾಂಗ ಇಲಾಖೆ, ಅಭಿಯೋಜಕರ ಇಲಾಖೆ, ಪೊಲೀಸ್ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ೨೦೨೪ನೇ ಆ.೧೫ ರಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲೂ ಎಲೆ ಮರೆ ಕಾಯಿಯಂತಿರುವ ಕೃಷಿ, ಸಾಮಾಜಿಕ, ಆಧ್ಯಾತ್ಮಿಕ, ಯೋಧರು, ಸಾಂಸ್ಕೃತಿಕ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಸರ್ಕಾರಿ ಸೇವೆ, ಬಾಲ ಕಲಾವಿದಾರಾಗಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸನ್ಮಾನಿಸಲಾಗುವುದು.
ಈ ಸನ್ಮಾನಿತರು ಬೇಲೂರಿನ ನ್ಯಾಯಾಲಯದಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣ ಹೊಂದಿರಬಾರದು. ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರು ಆಗಮಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಪೃಥ್ವಿ, ಕಾರ್ಯದರ್ಶಿ ಪುಟ್ಟಸ್ವಾಮಿಗೌಡ ಇದ್ದರು.