ಸಾಂಸ್ಕೃತಿಕ ನಗರಿ ಮೈಸೂರು ರಾಜಕೀಯ ಮೇಲಾಟದ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ಆಡಳಿತ ಹಾಗು ಪ್ರತಿ ಪಕ್ಷಗಳ ರಾಜಕೀಯ ಜಿದ್ದಾಜಿದ್ದಿನ ವೇದಿಕೆಗೆ ಮೈಸೂರು ಸಾಕ್ಷಿಯಾಗಿದೆ.
ಕಾಂಗ್ರೆಸ್ ಪಕ್ಷದ ಜನಾಂದೋಲನ ಸಮಾರೋಪ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದುನಾಳೆ (ಶುಕ್ರವಾರ) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಜನಾಂದೋಲನ ಸಮಾರೋಪ ಸಮಾವೇಶ ತೀವ್ರ ಕುತೂಹಲ ಕೆರಳಿಸಿದೆ.
ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ತಿರುಗೇಟು ನೀಡಲು ಕೈ ಪಡೆ ಸಿದ್ದತೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಲು ನಡೆಯುತ್ತಿರುವ ಬೃಹತ್ ಸಮಾವೇಶದ ಯಶಸ್ಸಿಗಾಗಿ ಕಾಂಗ್ರೆಸ್ ಕಟ್ಟಾಳುಗಳು ಪಣತೊಟ್ಟಿದ್ದಾರೆ.
ಬಿಜೆಪಿ-ಜೆಡಿಎಸ್ ಆರೋಪಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ನಾಯಕರು ತಯಾರಿ ನಡೆಸಿದ್ದಾರೆ.
ಇದರ ನಡುವೆಯೇ ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿ-ಜೆಡಿಎಸ್ ಭರ್ಜರಿ ರಣತಂತ್ರ ರೂಪಿಸಿದ್ದಾರೆ.
ಮುಡಾ ಹಗರಣ ಮುಂದಿಟ್ಟುಕೊಂಡು ಆರಂಭವಾಗಿರುವ ಮೈತ್ರಿ ಪಾದಯಾತ್ರೆ ಸಮಾರೋಪಕ್ಕೆ ಬಿಜೆಪಿ-ಜೆಡಿಎಸ್ ನಿಂದಲೂ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು ನಾಡಿದ್ದು (ಶನಿವಾರ) ಮೈಸೂರಿನಲ್ಲಿ ನಡೆಯಲಿರುವ ಸಮಾವೇಶ ನಡೆಯಲಿದೆ.ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಗಳಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟದ ಲಾಭ ಪಡೆಯಲು ಹೆಚ್ ಡಿ ಕೆ ಮತ್ತು ಡಿ ಕೆ ಶಿ ಪೈಪೋಟಿ ನಡೆಸ್ತಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಮುಂದಾಗುತ್ತಿದ್ದಂತೆ ಅಲರ್ಟ್ ಆದ ಡಿಕೆಶಿ, ಮೈತ್ರಿ ಪಕ್ಷಗಳ ಪಾದಯಾತ್ರೆಗೂ ಮುನ್ನಾ ದಿನವೇ ಜನಾಂದೋಲನ ಯಾತ್ರೆ ಆರಂಭಿಸಿ ಟಕ್ಕರ್ ಕೊಡ್ತಿದ್ದಾರೆ. ಬಿಜೆಪಿ-ಜೆಡಿಎಸ್
ಆರೋಪಗಳಿಗೆ ತಿರುಗೇಟು ನೀಡುತ್ತಾ ಸಾಗಿರುವ ಡಿಕೆಶಿ, ಸಕ್ತತಾಗಿಯೇ ಕೌಂಟರ್ ಕೊಡ್ತಿದ್ದಾರೆ.ಡಿಕೆಶಿ ಹಾಗೂ ಹೆಚ್ ಡಿಕೆ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಒಕ್ಕಲಿಗರ ಪಾಳೆಪಟ್ಟಿನಲ್ಲಿ ಹಿಡಿತ ಸಾಧಿಸಲು ಇಬ್ಬರು ಅಖಾಡಕ್ಕೆ ಇಳಿದಿದ್ದಾರೆ.