ಪ್ರತಿನಿಧಿ ವರದಿ ಹೊಳೆನರಸೀಪುರ
ತಾಲೂಕಿನ ಹರದನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ತಾಲೂಕು ಆರೋಗ್ಯಾಧಿಕಾರಿ ಎಚ್.ಎನ್.ಡಾ.ರಾಜೇಶ್ ಭೇಟಿ ನೀಡಿ, ಡೆಂಘೆ ರೋಗ ಹರಡುವಿಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿದರು.
ನಂತರ ಶಾಲೆಯ ಸುತ್ತಮುತ್ತ ಪರಿಸರದ ಸ್ವಚ್ಛತೆ ಪರಿಶೀಲಿಸಿ, ತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ಶಾಲಾ ಶಿಕ್ಷಕರಿಗೆ ಸೂಚನೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸೋಮಶೇಖರ್, ಶಾಲಾ ಸಿಬ್ಬಂದಿ, ಆಶಾ ಕಾರ್ಯರ್ತೆ ಉಪಸ್ಥಿತರಿದ್ದರು.