ಪ್ರತಿನಿಧಿ ವರದಿ ಆಲೂರು
ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚಿರುವುದು, ವೈಟ್ ಬೋರ್ಡ್ನ ನಾಲ್ಕು ಚಕ್ರದ ವಾಹನವುಳ್ಳವರು, ಐ.ಟಿ. ರಿಟನ್ಸ್ (ಆದಾಯ ತೆರಿಗೆ) ಪಾವತಿಸುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ವಮಾನ ನೀರಾವರಿ ಭೂಮಿ ಹೊಂದಿರುವವರು, ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತೀರ್ಣ ಸ್ವಂತ ಮನೆ ಹೊಂದಿರುವವರು, ಸರ್ಕಾರಿ, ಅರೆ ಸರ್ಕಾರಿ ಉದ್ಯೋಗದಲ್ಲಿರುವವರು ಇತ್ಯಾದಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಾಗಿರುವುದಿಲ್ಲ.
ಅನರ್ಹತೆ ಇರುವ ಹಾಗೂ ಕಾನೂನು ಬಾಹಿರವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದು ಕರ್ನಾಟಕ ಪ್ರಿವೆನ್ಷನ್ ಆಫ್ ಅನ್ ಆಥರೈಜಡ್ ಪೊಸಿಷನ್ ಆಫ್ ರೇಷನ್ ಕಾರ್ಡ್, 1977ರ ಆದೇಶದಂತೆ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಅನರ್ಹರು ಚೀಟಿ ಹೊಂದಿದ್ದಲ್ಲಿ ಆ.31ರೊಳಗಾಗಿ ತಹಸೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಅಥವಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಆದ್ಯರ್ಪಿಸಬೇಕು. ತಪ್ಪಿದಲ್ಲಿ ಅನರ್ಹ ಪಡಿತರ ಚೀಟಿದಾರರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ನಂದಕುಮಾರ್ ತಿಳಿಸಿದ್ದಾರೆ.