ಪ್ರತಿನಿಧಿ ವರದಿ ಆಲೂರು
ಕಣತೂರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪೃಥ್ವಿ ಜಯರಾಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಈ ಸ್ಥಾನಕ್ಕೆ ಪೃಥ್ವಿ ಜಯರಾಮ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿ ತಾಪಂ ಕಾರ್ಯನಿರ್ವಣಾಧಿಕಾರಿ ಶ್ರೀನಿವಾಸ್ ಅವಿರೋಧ ಆಯ್ಕೆ ಘೋಷಿಸಿದರು. ಫಲಿತಾಂಶದ ಬಳಿಕ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪೃಥ್ವಿ ಜಯರಾಮ್ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಸರ್ವ ಸದಸ್ಯರ ಸಹಕಾರದೊಂದಿಗೆ ಗ್ರಾಪಂಯನ್ನು ಮೂಲ ಸೌಕರ್ಯಗಳೊಂದಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ತಾಪಂ ಮಾಜಿ ಸದಸ್ಯ ನಟರಾಜು ನಾಕಲಗೂಡು, ಪಾಳ್ಯ ಹಾಲು ಒಕ್ಕೂಟದ ಅಧ್ಯಕ್ಷ ಪಿ.ಎಲ್.ನಿಂಗರಾಜು, ವಜ್ರೇಶ್, ಮಹೇಂದ್ರ ಜಗದೀಶ್, ಸಂದೇಶ್ ಹಳೇ ಆಲೂರು, ಮಡಬಲು ಲೋಕೇಶ್, ಉಪಾಧ್ಯಕ್ಷೆ ರಾಧಾ, ಸದಸ್ಯರಾದ ಕವಿತಾ, ನಿಂಗರಾಜು, ಪುಷ್ಪಾವತಿ, ಪದ್ಮ, ಶಾರದ, ನಾಗರತ್ನ, ಕವಿತಾ, ಕೃಷ್ಣೇಗೌಡ, ನಿರ್ವಾಣಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಸೇರಿದಂತೆ ಇತರರು ಇದ್ದರು.