ಪ್ರತಿನಿಧಿ ವರದಿ ಹಾಸನ
ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಕುಂದುಕೊರತೆ ಸಮಸ್ಯೆಗಳ ನಿವಾರಣೆಗೆ ಸರ್ಕಾರ ರಚಿಸಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯ 4ನೇ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಗೆ ಈಗಾಗಲೇ ಸಂಘದ ವತಿಯಿಂದ ಪತ್ರ ವ್ಯವಹರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಕರ್ತವ್ಯದ ವೇಳೆ ಅನುಭವಿಸುತ್ತಿರುವ ಕುಂದುಕೊರತೆಗಳು, ಎದುರಿಸುತ್ತಿರುವ ಸಮಸ್ಯೆಗಳು, ನಿಗದಿತ ಸಮಯದಲ್ಲಿ ನೌಕರರಿಗೆ ಸೇವಾ ಸೌಲಭ್ಯಗಳು ಹಾಗೂ ಇತರ ಸಮಸ್ಯೆಗಳನ್ನು ಸಮಾಲೋಚನಾ ಸಭೆಯಲ್ಲಿ ಮಂಡಿಸಲು ನೌಕರರು ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆ.31ರೊಳಗಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ತಲುಪಿಸುವಂತೆ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ಕೋರಿದ್ದಾರೆ.